ಬೆಂಗಳೂರು,ಆಗಸ್ಟ್,28,2026 (www.justkannada.in): ನನ್ನಿಂದ ಪಕ್ಷಕ್ಕೆ ಮುಜುಗರವಾದರೆ ರಾಜೀನಾಮೆ ಕೊಡುತ್ತೇನೆ ಎಂದು ಸಚಿವ ಬಿ. ನಾಗೇಂದ್ರ ತಿಳಿಸಿದ್ದಾರೆ.
ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿ ಏರ್ ಪೋರ್ಟ್ ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ನಾಗೇಂದ್ರ, ದಲಿತ ಎಂಬ ಕಾರಣಕ್ಕೆ ಬಿಜೆಪಿಯವರು ನನ್ನನ್ನ ಟಾರ್ಗೆಟ್ ಮಾಡಿದ್ದಾರೆ. ದಲಿತರ ವಿರುದ್ದ ಮನವಾದಿಗಳು ಕುತಂತ್ರ ಮಾಡುತ್ತಲೇ ಬಂದಿದ್ದಾರೆ ಎಂದರು.
ನನ್ನಿಂದ ಪಕ್ಷಕ್ಕೆ ಮುಜುಗರವಾದ್ರೆ ರಾಜೀನಾಮೆ ಕೊಡುತ್ತೀನಿ. ನಾನು ಸಿಎಂ ಭೇಟಿಗೆ ತೆರಳುತ್ತಿದ್ದೇನೆ, ಬಗ್ಗೆ ಕೂಲಂಕಷವಾಗಿ ಸಿಎಂ ಜೊತೆ ಚರ್ಚಿಸುತ್ತೇನೆ. ನನ್ನಿಂದ ಪಕ್ಷಕ್ಕೆ ಮುಜುಗರ ಆಗಬಾರದು ಎಂದರು.
Key words: I will ,resign , embarrass , party, Minister, B. Nagendra







