ಮೈಸೂರು,ಆಗಸ್ಟ್.31,2026 (www.justkannada.in): ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ ಪ್ರಜಾಸೇವಾ ಅಭಿಯಾನದಡಿ ಮೈಸೂರು ಜಿಲ್ಲೆಯಾದ್ಯಂತ ಸೆಪ್ಟೆಂಬರ್ 05 ರಿಂದ ಸಭೆಗಳು ಪ್ರಾರಂಭವಾಗಲಿವೆ. ಸಾರ್ವಜನಿಕ ಕುಂದು-ಕೊರತೆಗಳನ್ನು ಆಲಿಸಿ ಅವುಗಳಿಗೆ ಸಕಾಲದಲ್ಲಿ ಸೂಕ್ತ ಪರಿಹಾರ ಒದಗಿಸುವ ಉದ್ದೇಶದಿಂದ ಸಭೆಗಳನ್ನು ಆಯೋಜಿಸಲಾಗುವುದು ಎಂದು ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ.ಜಿ ತಿಳಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ ಹುಣಸೂರು ಕ್ಷೇತ್ರದ ಶಾಸಕರ ಉಪಸ್ಥಿತಿಯಲ್ಲಿ ಪ್ರಜಾಸೇವ ಅಭಿಯಾನ ಕಾರ್ಯಕ್ರಮವನ್ನು ಸೆಪ್ಟೆಂಬರ್ 05 ರಂದು ಬೆಳಿಗ್ಗೆ 11:00 ಗಂಟೆಗೆ ಹುಣಸೂರು ಟೌನ್ ನ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಹುಣಸೂರು ತಾಲ್ಲೂಕಿನ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳು ಹಾಗೂ ಕೋರಿಕೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಈ ಸಭೆಯಲ್ಲಿ ನೇರವಾಗಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಸಲ್ಲಿಸಿ, ಪರಿಹಾರ ಕಂಡುಕೊಳ್ಳಬಹುದು. ತಾಲ್ಲೂಕಿನ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕಾಗಿ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Key words: Public service, campaign, Hunsur, Sept. 5, Mysore DC







