ಬಳ್ಳಾರಿ, ವಿಜಯಪುರ ಜಿಲ್ಲಾ ಪ್ರವಾಸ ರದ್ದುಗೊಳಿಸಿದ ಸಿಎಂ ಬಿಎಸ್ ವೈ….

ಬೆಂಗಳೂರು,ಜ,16,2020(www.justkannada.in):  ಇಂದು ಮತ್ತು ನಾಳೆ ಬಳ್ಳಾರಿ ಮತ್ತು ವಿಜಯಪುರಕ್ಕೆ ಪ್ರವಾಸ ಕೈಗೊಳ್ಳಬೇಕಿದ್ದ ಸಿಎಂ ಬಿಎಸ್ ಯಡಿಯೂರಪ್ಪ, ಇದೀಗ ಪ್ರವಾಸವನ್ನ ರದ್ದುಗೊಳಿಸಿದ್ದಾರೆ.

ಸಿಎಂ ಬಿಎಸ್ ಯಡಿಯೂರಪ್ಪ ಇಂದು ಮತ್ತು ನಾಳೆ ಬಳ್ಳಾರಿ ಮತ್ತು ವಿಜಯಪುರ ಜಿಲ್ಲಾ ಪ್ರವಾಸ ನಿಗದಿಯಾಗಿತ್ತು. ಆದರೆ ನಾಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿದ್ದಾರೆ. ಹೀಗಾಗಿ ಎರಡು ಜಿಲ್ಲೆಗಳ ಜಿಲ್ಲಾ ಪ್ರವಾಸವನ್ನ ರದ್ದುಗೊಳಿಸಿದ್ದಾರೆ. ನಾಳೆ ಮತ್ತು ಜನವರಿ 18 ರಂದು ಅಮಿತ್ ಶಾ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.

Key words: CM BS yeddyurappa- cancels- tour – Bellary- Vijayapur- district