Sunday, August 2, 2026

BDA Apartments

Home Crime ಮರಿಯಮ್ಮನಹಳ್ಳಿ ಬಳಿ ಕಾರು ಅಪಘಾತ ಪ್ರಕರಣ ಕುರಿತು ಬಳ್ಳಾರಿ ಎಸ್ಪಿ ಸಿ.ಕೆ ಬಾಬಾ ಸ್ಪಷ್ಟನೆ ಕೊಟ್ಟಿದ್ದು...

ಮರಿಯಮ್ಮನಹಳ್ಳಿ ಬಳಿ ಕಾರು ಅಪಘಾತ ಪ್ರಕರಣ ಕುರಿತು ಬಳ್ಳಾರಿ ಎಸ್ಪಿ ಸಿ.ಕೆ ಬಾಬಾ ಸ್ಪಷ್ಟನೆ ಕೊಟ್ಟಿದ್ದು ಹೀಗೆ……

ಬಳ್ಳಾರಿ,ಫೆ,13,2020(www.justkannada.in): ಮರಿಯಮ್ಮನಹಳ್ಳಿ ಬಳಿ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತವಾದ ಕಾರಿನಲ್ಲಿ ಸಚಿವ ಆರ್.ಅಶೋಕ್ ಅವರ ಪುತ್ರ ಇದ್ದರು ಎಂಬ ಸುದ್ದಿ ಹರಡಿರುವ ಹಿನ್ನೆಲೆ ಈ ಬಗ್ಗೆ ಬಳ್ಳಾರಿ ಎಸ್ಪಿ ಸಿ.ಕೆ ಬಾಬಾ ಸ್ಪಷ್ಟನೆ ನೀಡಿದ್ದಾರೆ.

ಅಪಘಾತವಾದ ಕಾರಿನಲ್ಲಿ ಸಚಿವರ ಪುತ್ರ ಇರಲಿಲ್ಲ. ಪ್ರಕರಣ ಸಂಬಂಧ ನನ್ನ ಮೇಲೆ ಯಾರ ಒತ್ತಡವಿಲ್ಲ. ಪಾರದರ್ಶಕವಾಗಿ ತನಿಖೆ ನಡೆಯುತ್ತಿದೆ ಎಂದು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ.ಕೆ ಬಾಬಾ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಬಳ್ಳಾರಿ ಎಸ್ಪಿ ಸಿ.ಕೆ ಬಾಬಾ, ಈ ಕೇಸ್ ನಲ್ಲಿ ಕರ್ತವ್ಯಲೋಪವಾಗಿಲ್ಲ.  ಕಾರಿನಲ್ಲಿ ಸಚಿವರ ಪುತ್ರ ಇದ್ದರು ಎಂಬುದು ವದಂತಿ. ಘಟನೆ ನಡೆದಾಗ ಪೊಲೀಸರು ಸೂಕ್ತ ಕ್ರಮ ಕೈಗೊಂಡಿದ್ದಾರೆ. ಈ ನಡುವೆ ಘಟನೆಯಲ್ಲಿ  ರವಿನಾಯ್ಕ ಎಂಬಾತ ಮೃತಪಟ್ಟಿದ್ದಾನೆ. ಇನ್ನು ಕಾರಿನಲ್ಲಿ ಐವರು ಇದ್ದರು. ಕಾರನ್ನ ರಾಹುಲ್ ಎಂಬಾತ ಚಲಾಯಿಸುತ್ತಿದ್ದ. ಕಾರು ಯಾರಿಗೆ ಸೇರಿದ್ದು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

Key words: car accident-case- minister-r.ashok-ballari –SP-CK baba