Sunday, August 9, 2026

BDA Apartments

Home Front Page ತೆವಲಿಗೆ ಮಾತನಾಡಬೇಡಿ ಎಂದಿದ್ದ ಹೆಚ್.ಡಿ ಕುಮಾರಸ್ವಾಮಿಗೆ  ಟಾಂಗ್ ಕೊಟ್ಟ ಕೃಷಿ ಸಚಿವ ಬಿ.ಸಿ.ಪಾಟೀಲ್

ತೆವಲಿಗೆ ಮಾತನಾಡಬೇಡಿ ಎಂದಿದ್ದ ಹೆಚ್.ಡಿ ಕುಮಾರಸ್ವಾಮಿಗೆ  ಟಾಂಗ್ ಕೊಟ್ಟ ಕೃಷಿ ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು, ಮಾ‌ 10,2020(www.justkannada.in):  ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬಳಸುವಂತಹ ಹಗುರವಾದ ಪದಗಳನ್ನಾಗಲೀ ಅವರು ಹೇಳಿರುವಂತೆ ತೆವಲು ಭಾಷೆಯನ್ನಾಗಲೀ ತಾವು ಬಳಸುವುದಿಲ್ಲ ಎಂದು ಹೆಚ್.ಡಿ  ಕುಮಾರಸ್ವಾಮಿ ಅವರಿಗೆ ಕೃಷಿ  ಸಚಿವರಾದ ಬಿ.ಸಿ‌ ಪಾಟೀಲ್  ತಿರುಗೇಟು ನೀಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರಿಗೆ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಕೃಷಿ ಸಚಿವ ಬಿಸಿ ಪಾಟೀಲ್, ತೆವಲಿನ ಬಗ್ಗೆ ಕುಮಾರಸ್ವಾಮಿ ಅವರಿಗೆ ಬಹಳ ಚೆನ್ನಾಗಿಯೇ ಗೊತ್ತಿದೆ ಅನಿಸುತ್ತದೆ.ಕ್ಷೇತ್ರದ ಜನರು ತಮ್ಮನ್ನು ಸುಮ್ಮನೆ  ಆರಿಸಿ ಕಳಿಸಿಲ್ಲ .2006-07 ರಲ್ಲಿ ತಾವು ಅಷ್ಟು ಕೆಲಸ ಮಾಡಿಕೊಂಡು ಹೋಗಿದ್ದೇನೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ. ಅದು ನನ್ನ ಮನೆಗೆ ಕೊಟ್ಟ ದುಡ್ಡಲ್ಲ. ಶಾಸಕನಾಗಿ ಗೆದ್ದು ಬಂದಿದ್ದಾಗ ಕ್ಷೇತ್ರದ ಅಭಿವೃದ್ಧಿಗೆ  ಕೊಡಬೇಕಾದ ಹಣ ಅದು. ಸುಮ್ಮನೆ ದಾರಿಲೀ ಹೋಗುವವನಿಗೆ ಕೊಟ್ಟ ದುಡ್ಡಲ್ಲ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದು ನಾವು. ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡಿರುವುದು ಅವರ ಕರ್ತವ್ಯ. ಕ್ಷೇತ್ರಕ್ಕೆ ಕೊಟ್ಟ ಹಣವನ್ನು ಹೀಗೆ ಹೇಳುವುದು ಸರಿಯಲ್ಲ ಎಂದು ಕುಟುಕಿದರು.

ತಮ್ಮ ಬಗ್ಗೆ ಕುಮಾರಸ್ವಾಮಿ ಏಕವಚನದಲ್ಲಿ ಪದಪ್ರಯೋಗ ಮಾಡಿದ್ದಾರೆ. ಅವರು ಪದ ಬಳಕೆ ಮಾಡಿದಂತೆ  ತಾವು ಮಾಡುವುದಿಲ್ಲ‌ ಎಂದರು‌.

ಹಿರೇಕೆರೂರಿನಲ್ಲಿ  ಮೀಸಲಿಟ್ಟ ಹಣದಿಂದ ಕಾರ್ಯಕ್ರಮ ಉದ್ಘಾಟನೆ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಹೇಳಿರುವುದು ಸತ್ಯಕ್ಕೆ ದೂರವಾದ ಮಾತು‌. ಅವರು ತಮ್ಮ ಬಜೆಟ್ ನಲ್ಲಿ ನಮ್ಮ ಕ್ಷೇತ್ರ ಕ್ಕೆ ಒಂದು ರೂಪಾಯಿಯನ್ನೂ ನೀಡಿಲ್ಲ. ಕಾಂಗ್ರೆಸ್‌ ಗೆ ರಾಜೀನಾಮೆ ಕೊಟ್ಟ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆ ಚರ್ಚೆ ಮಾಡಿ, ಡಿಪಿಎಆರ್ ನಲ್ಲಿ ಆದೇಶ ಮಾಡಿಸಿ ಕ್ಯಾಬಿನೆಟ್ ನಲ್ಲಿ ಅನುಮೋದನೆ ಪಡೆದು ಬಳಿಕ  185ಕೋಟಿ ರೂ ಬಿಡುಗಡೆ ಮಾಡಿಸಿ ನಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯ ಮಾಡಿದ್ದೇನೆ. ಅದು ಕುಮಾರಸ್ವಾಮಿ ಕೊಟ್ಟ ಅನುದಾನ ಅಲ್ಲ ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಸ್ಪಷ್ಟಪಡಿಸಿದರು.

Key words: Agriculture Minister- BC Patil –tong- HD Kumaraswamy