Thursday, August 13, 2026

BDA Apartments

Home Front Page ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಎಚ್.ವಿಶ್ವನಾಥ್ ನಿರ್ಧಾರ

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಎಚ್.ವಿಶ್ವನಾಥ್ ನಿರ್ಧಾರ

ಬೆಂಗಳೂರು, ಜೂನ್ 02, 2019 (www.justkannada.in): ಜೆಡಿಎಸ್ ರಾಜ್ಯಾಧ್ಯಕ್ಷ, ಶಾಸಕ ಎಚ್.ವಿಶ್ವನಾಥ್ ರಾಜೀನಾಮೆ ನೀಡುವುದು ಖಚಿತವಾಗಿದೆ.

ಇತ್ತೀಚೆಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತಾವು ಸೂಚಿಸಿದ ಅಭ್ಯರ್ಥಿಗಳಿಗೆ ಪಕ್ಷದಿಂದ ಟಿಕೆಟ್ ನೀಡಲಿಲ್ಲ ಎಂದು ಅಸಮಾಧಾನಗೊಂಡಿದ್ದ ಅವರು, ಸಚಿವ ಸಾ.ರಾ.ಮಹೇಶ್ ವಿರುದ್ಧ ಬಹಿರಂಗ ಹೇಳಿಕೆಗಳನ್ನು ನೀಡಿದ್ದರು.

ಜೆಡಿಎಸ್‍ನಲ್ಲಿ ತಮಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಹೇಳುವ ಮೂಲಕ ತಮ್ಮೆಲ್ಲ ಆಕ್ರೋಶವನ್ನು ಅವರು ಹೊರ ಹಾಕಿದ್ದರು. ಈ ಮೊದಲು ಅನಾರೋಗ್ಯ ಕಾರಣಕ್ಕಾಗಿ ವಿಶ್ವನಾಥ್ ಎರಡು ಬಾರಿ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಅದಕ್ಕೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಆದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವಕಾಶ ಕೊಟ್ಟಿರಲಿಲ್ಲ.

ಇದೀಗ ವಿಶ್ವನಾಥ್ ಅವರು ರಾಜೀನಾಮೆ ನೀಡಲು ಸಿದ್ಧರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.