Wednesday, September 9, 2026

BDA Apartments

Home Front Page ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಮುನಿರತ್ನ…

ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಮುನಿರತ್ನ…

ಬೆಂಗಳೂರು,ಅಕ್ಟೋಬರ್,14,2020(www.justkannada.in):  ರಾಜರಾಜೇಶ್ವರಿನಗರ ಉಪಚುನಾವಣಾ ಕಣ ರಂಗೇರಿದ್ದು ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಇಂದು ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.jk-logo-justkannada-logo

ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠಕ್ಕೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು. ಬಳಿಕ ಮಾತನಾಡಿದ ಅವರು ಇಂದು ನಾಮಪತ್ರ ಸಲ್ಲಿಕೆಗೆ ಒಳ್ಳೆಯದಿನ. ಇಂದು ನಾಮಪತ್ರ ಸಲ್ಲಿಸುತ್ತಿದ್ದೇನೆ ಎಂದರು.rr-nagar-bjp-candidate-muniratha-adichunchanagiri-math-received-blessings

ಆರ್.ಆರ್ ನಗರ ಉಪಚುನಾವಣಾ ಬಿಜೆಪಿ ಟಿಕೆಟ್ ಗಾಗಿ ತುಳಸಿಮುನಿರಾಜುಗೌಡ ಮತ್ತು ಮುನಿರತ್ನ ಅವರ ನಡುವೆ ಪೈಪೋಟಿ ನಡೆದಿತ್ತು. ಈ ಮಧ್ಯೆ ತುಳಸಿ ಮುನಿರಾಜು ಅವರು ಚುನಾವಣೆ ಮುಂದೂಡುವಂತೆ ಸಲ್ಲಿಸಿದ್ದ ಅರ್ಜಿಯನ್ನ  ನಿನ್ನೆ ಸುಪ್ರೀಂಕೋರ್ಟ್ ವಜಾಗೊಳಿಸಿತ್ತು. ಈ ಬೆನ್ನಲ್ಲೆ ಮುನಿರತ್ನ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡಿದ್ದು ಇಂದು ಆರ್.ಆರ್ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ ನಾಮಪತ್ರ ಸಲ್ಲಿಸಲಿದ್ದಾರೆ.

Key words: RR Nagar- BJP candidate – Muniratha- Adichunchanagiri math- received – blessings