Monday, August 31, 2026

BDA Apartments

Home Front Page ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಡಿಸಿಎಂ ಲಕ್ಷ್ಮಣ್ ಸವದಿ ಸಂತಸ ವ್ಯಕ್ತಪಡಿಸಿದ್ದು ಹೀಗೆ…

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಡಿಸಿಎಂ ಲಕ್ಷ್ಮಣ್ ಸವದಿ ಸಂತಸ ವ್ಯಕ್ತಪಡಿಸಿದ್ದು ಹೀಗೆ…

ಬೆಂಗಳೂರು,ನವೆಂಬರ್,17,2020(www.justkannada.in): ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವನ್ನ ಸ್ಥಾಪಿಸಿ ಸಿಎಂ ಬಿಎಸ್ ಯಡಿಯೂರಪ್ಪ ಆದೇಶ ಹೊರಡಿಸಿದ ಹಿನ್ನೆಲೆ ಈ ಬಗ್ಗೆ ಡಿಸಿಎಂ ಲಕ್ಷ್ಮಣ್ ಸವದಿ ಸಂತಸ ವ್ಯಕ್ತಪಡಿಸಿದ್ದಾರೆ.kannada-journalist-media-fourth-estate-under-loss

ಈ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಲಕ್ಷ್ಮಣ್ ಸವದಿ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕೆಂಬ ನಮ್ಮ ಮನವಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿ ಈ ಬಗ್ಗೆ ಸೂಕ್ತ ಐತಿಹಾಸಿಕ ನಿರ್ಧಾರ ಕೈಗೊಂಡಿರುವ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರನ್ನು ನಾನು ಹೃತ್ಪೂರ್ವಕವಾಗಿ ಅಭಿನಂದಿಸುವುದಾಗಿ ತಿಳಿಸಿದ್ದಾರೆ.

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವ ಮೂಲಕ ಈ ಸಮುದಾಯದಲ್ಲಿನ ಬಡವರು ಮತ್ತು ಹಿಂದುಳಿದವರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿಗೆ ಮತ್ತಷ್ಟು ಪ್ರೋತ್ಸಾಹ ನೀಡಿದ ಶ್ರೇಯಸ್ಸು ಬಿ.ಎಸ್. ಯಡಿಯೂರಪ್ಪ ಅವರಿಗೆ ಸಲ್ಲುತ್ತದೆ. ಈ ಬಗ್ಗೆ ದಿಟ್ಟ ನಿರ್ಧಾರ ಕೈಗೊಂಡ ಅವರಿಗೆ ನಮ್ಮೆಲ್ಲರ ಕೃತಜ್ಞತೆಗಳು ಎಂದು  ಲಕ್ಷ್ಮಣ ಸವದಿ ಅವರು ತಿಳಿಸಿದ್ದಾರೆ.dcm-laxman-savdi-pleased-express-happiness-veerashaiva-lingayat-development-corporation

ನಿನ್ನೆಯಷ್ಟೇ  ಲಕ್ಷ್ಮಣ ಸವದಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ನಿಯೋಗವು, ವೀರಶೈವ ಲಿಂಗಾಯತರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕೆಂದು ಮನವಿ ಮಾಡಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದು.

Key words: DCM Laxman Savdi- pleased –express- happiness-Veerashaiva Lingayat Development Corporation.