Wednesday, August 5, 2026

BDA Apartments

Home Front Page ರಾಮನಗರ ಜಿಲ್ಲೆಯಲ್ಲಿ ಕುಡಿಯುವ ನೀರು ಯೋಜನೆಗೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ  

ರಾಮನಗರ ಜಿಲ್ಲೆಯಲ್ಲಿ ಕುಡಿಯುವ ನೀರು ಯೋಜನೆಗೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ  

ರಾಮನಗರ, ಜೂ. 18,2019(www.justkannada.in): ಮುಖ್ಯಮಂತ್ರಿ  ಎಚ್ ಡಿ ಕುಮಾರಸ್ವಾಮಿ ಅವರು ರಾಮನಗರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಸುಮಾರು 540 ಕೋಟಿ ರೂ. ವೆಚ್ಚದ ಯೋಜನೆಗೆ ಇಂದು ಕಣ್ವಾ ಜಲಾಶಯ ಬಳಿ ಗುದ್ದಲಿ ಪೂಜೆ ನೆರವೇರಿಸಿದರು.

ಚನ್ನಪಟ್ಟಣ, ಮಾಗಡಿ, ರಾಮನಗರ,ಕನಕಪುರ ತಾಲ್ಲೂಕಿನ ಎಲ್ಲ ಹಳ್ಳಿ ಹಾಗೂ ಪಟ್ಟಣಗಳಿಗೆ ಕುಡಿಯುವ ನೀರು ಸರಬರಾಜು ಮಾಡಲು ಸತ್ತೇಗಾಲ ಸಮೀಪದಲ್ಲಿ ಕಾವೇರಿ ನದಿಯಿಂದ ಇಗ್ಗಲೂರು ಎಚ್ ಡಿ ದೇವೇಗೌಡ ಬ್ಯಾರೆಜ್ ಗೆ ಗುರುತ್ವಾಕರ್ಷಣೆಯ ಮೂಲಕ ನೀರು ಹರಿಸುವ ಯೋಜನೆ ಇದಾಗಿದೆ.

ಕಾವೇರಿ ನದಿಯಿಂದ 210 ಕ್ಯೂಸೆಕ್  ನೀರನ್ನು  ಈ ಮಹಾತ್ವಾಂಕ್ಷಿ ಯೋಜನೆಯಡಿ ಪೈಪಗಳ ಮೂಲಕ ನೀರನ್ನು ಇಗ್ಗಲೂರು, ಕಣ್ವಾ, ವೈಜಿ ಗುಡ್ಡ, ಮಂಚನಬೆಲೆ  ಜಲಾಶಯಗಳಿಗೆ ತುಂಬಿಸಲಾಗುವುದು.ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವರಾದ ಶ್ರೀ ಸಾ.ರ.ಮಹೇಶ್ ಹಾಗೂ ಸ್ಥಳೀಯ ಮುಖಂಡರು ಭಾಗವಹಿಸಿದ್ದರು.

Key words: Drinking Water Project – Ramanagar –District-CM HD Kumaraswamy.