Sunday, August 16, 2026

BDA Apartments

Home Front Page ಸಂಕಷ್ಟದಲ್ಲಿರುವ ಪತ್ರಕರ್ತರ ಕುಟುಂಬಕ್ಕೆ ನೆರವು ಮುಂದುವರಿಕೆ, ವಿವಿಗಳಲ್ಲಿ ಅಧ್ಯಯನ ಪೀಠ- ಸಿಎಂ ಬಿಎಸ್ ಯಡಿಯೂರಪ್ಪ…

ಸಂಕಷ್ಟದಲ್ಲಿರುವ ಪತ್ರಕರ್ತರ ಕುಟುಂಬಕ್ಕೆ ನೆರವು ಮುಂದುವರಿಕೆ, ವಿವಿಗಳಲ್ಲಿ ಅಧ್ಯಯನ ಪೀಠ- ಸಿಎಂ ಬಿಎಸ್ ಯಡಿಯೂರಪ್ಪ…

ಬೆಂಗಳೂರು,ಫೆಬ್ರವರಿ,12,2021(www.justkannada.in):  ಕಾರ್ಯ ನಿರತ ಪತ್ರಕರ್ತರಾಗಿದ್ದು ಅನಾರೋಗ್ಯ ಅಥವಾ ಸಾವಿಗೆ ತುತ್ತಾದ ಸಂದರ್ಭದಲ್ಲಿ ಆ ಕುಟುಂಬಕ್ಕೆ  ಗರಿಷ್ಠ 5 ಲಕ್ಷ ರೂ. ನೀಡುತ್ತಿರುವ ನೆರವನ್ನು ಮುಂದುವರೆಸಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸಮ್ಮತಿಸಿದ್ದಾರೆ.jk

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ಅಧ್ಯಕ್ಷರಾದ ಶಿವಾನಂದ ತಗಡೂರು ನೇತೃತ್ವದ ನಿಯೋಗದ ಮನವಿಯನ್ನು‌ ಸ್ವೀಕರಿಸಿದ  ಸಿಎಂ ಬಿಎಸ್ ಯಡಿಯೂರಪ್ಪ, ಪತ್ರಕರ್ತರ ಕಲ್ಯಾಣಕ್ಕೆ ಪೂರಕವಾದ ಬೇಡಿಕೆಗಳ ಈಡೇರಿಕೆಗೆ ಬಜೆಟ್ ನಲ್ಲಿ ಸೇರ್ಪಡೆಗೊಳಿಸುವ ಬಗ್ಗೆ ಸಕರಾತ್ಮಕವಾಗಿ ಸ್ಪಂದಿಸಿದ್ದಲ್ಲದೆ ಹಾಲಿ ನೀಡಲಾಗುತ್ತಿರುವ ನೆರವನ್ನು ಮುಂದುವರೆಸಲಾಗುವುದು ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.

ವಿಜಯಪುರ ವಿವಿಯಲ್ಲಿ ಹಿರಿಯ ಪತ್ರಕರ್ತರಾದ ಮೊಹರೆ ಹನುಮಂತರಾಯ ಬೆಂಗಳೂರು ವಿವಿಯಲ್ಲಿ ಎಚ್.ಎಸ್. ದೊರೆಸ್ವಾಮಿ ಮತ್ತು ಧಾರವಾಡ ವಿಶ್ವವಿದ್ಯಾಲಯಗಳಲ್ಲಿ ಹಿರಿಯ ಪತ್ರಕರ್ತರಾದ ಪಾಟೀಲ್ ಪುಟ್ಟಪ್ಪ (ಪಾಪು) ಅವರ ಹೆಸರಿನಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ಆಧ್ಯಯನ‌ಪೀಠ ಸ್ಥಾಪಿಸಬೇಕೆಂಬ ಸಂಘದ ಮನವಿಗೆ  ಸಿಎಂ ಬಿಎಸ್ ಯಡಿಯೂರಪ್ಪ ಸ್ಪಂದಿಸಿದ್ದು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ತಾಲ್ಲೂಕು ಕೇಂದ್ರಗಳಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ಹಣಕಾಸು ಸ್ಥಿತಿ ನೋಡಿ ನೆರವು, ಬಸ್ ಪಾಸ್, ಜಾಹೀರಾತು ಹಣ ಶೀಘ್ರ ಬಿಡುಗಡೆ ಸೇರಿದಂತೆ ಅನೇಕ ಬೇಡಿಕೆಗಳ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿದರು.continuation-family-distressed-journalists-cm-bs-yeddyurappa

ನಿಯೋಗದಲ್ಲಿ ಕೆಯುಡಬ್ಲ್ಯಜೆ ಪ್ರಧಾನ ಕಾರ್ಯದರ್ಶಿ ಲೊಕೇಶ್, ನಿರ್ದೇಶಕರಾದ ಎನ್.ರವಿಕುಮಾರ್, ಜೆ.ಆರ್.ಕೆಂಚೇಗೌಡ, ಚೆಲುವರಾಜ್, ದೇವೇಂದ್ರಪ್ಪ ಕಪನೂರು, ಸೋಮಶೇಖರ ಕೆರಗೋಡು, ಮುನಿಕೃಷ್ಣಪ್ಪ, ಗಣಪತಿ ಗಂಗೊಳ್ಳಿ, ದೇವರಾಜು, ತೇಜಸ್ವಿನಿ, ರಶ್ಮಿಪಾಟೀಲ್ ಮೊದಲಾದವರಿದ್ದರು.

Key words: Continuation -family – distressed –journalists-CM BS Yeddyurappa.