Tuesday, August 4, 2026

BDA Apartments

Home Front Page ಮಾಸ್ಕ್ ಧರಿಸದ ಸಾರ್ವಜನಿಕರಿಗೆ ಗುಲಾಬಿ ಹೂ, ಮಾಸ್ಕ್ ನೀಡಿ ಅರಿವು ಮೂಡಿಸಿದ ಸಚಿವೆ ಶಶಿಕಲಾ ಜೊಲ್ಲೆ…

ಮಾಸ್ಕ್ ಧರಿಸದ ಸಾರ್ವಜನಿಕರಿಗೆ ಗುಲಾಬಿ ಹೂ, ಮಾಸ್ಕ್ ನೀಡಿ ಅರಿವು ಮೂಡಿಸಿದ ಸಚಿವೆ ಶಶಿಕಲಾ ಜೊಲ್ಲೆ…

ವಿಜಯಪುರ,ಏಪ್ರಿಲ್,23,2021(www.justkannada.in): ಕೋವಿಡ್ ಬಗ್ಗೆ ಅರಿವು ಮೂಡಿಸಲು ನಗರದ ಸಿದ್ದೇಶ್ವರ ದೇವಸ್ಥಾನದಿಂದ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಈ ಜಾಥಾಕ್ಕೆ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ ನೀಡಿದರು.jk

ಈ ವೇಳೆ ಮಾತನಾಡಿದ ಸಚಿವ ಶಶಿಕಲಾ ಜೊಲ್ಲೆ,  ಕಡ್ಡಾಯವಾಗಿ ಮಾಸ್ಕ್ ಧರಿಸುವದು, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವದು ಹಾಗೂ ನಿಯಮಿತವಾಗಿ ಸ್ಯಾನಿಟೈಸರ್ ಬಳಕೆಯಿಂದ ಈ ಕೊರೊನಾದಿಂದ ರಕ್ಷಿಸಿಕೊಳ್ಳಬಹುದು ಎಂದು ಹೇಳಿದರು. Minister - Shashikala Jolle- Covid –Awareness-distribute-mask- redrose

ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ಈ ಜಾಥಾ ನಗರದ ವಿವಿಧ ಬಡಾವಣೆಗಳಲ್ಲಿ ಸಂಚರಿಸಿ ಮಾಸ್ಕ್ ಧರಿಸದ ಸಾರ್ವಜನಿಕರಿಗೆ ಉಚಿತ ಮಾಸ್ಕ್ ಹಾಗೂ ಗುಲಾಬಿ ಹೂ ನೀಡಿ ಅರಿವು ಮೂಡಿಸಲಾಯಿತು. ಪ್ರಮುಖವಾಗಿ ಶಾಸ್ತ್ರಿ ಮಾರುಕಟ್ಟೆಯಲ್ಲಿ ಸಂಚರಿಸಿ ಅಂಗಡಿ ಮಾಲೀಕರಿಗೆ ಹಾಗೂ ವ್ಯಾಪಾರಿಗಳಿಗೆ ತಿಳುವಳಿಕೆ ಮೂಡಿಸಲಾಯಿತು.  ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಗೋವಿಂದರೆಡ್ಡಿ, ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್, ಬಿಜೆಪಿ  ಮುಖಂಡರಾದ ವಿಜುಗೌಡ ಪಾಟೀಲ್ ಹಾಜರಿದ್ದರು.

Key words: Minister – Shashikala Jolle- Covid –Awareness-distribute-mask- redrose