ಶ್ರೀಲಂಕಾ ವಿರುದ್ಧ ಸರಣಿ: ಟೀಂ ಇಂಡಿಯಾ ನಾಯಕತ್ವಕ್ಕೆ ಭಾರಿ ಪೈಪೋಟಿ

ಬೆಂಗಳೂರು, ಮೇ 11, 2021 (www.justkannada.in): ಶ್ರೀಲಂಕಾ ವಿರುದ್ಧ ಕ್ರಿಕೆಟ್ ಸರಣಿಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗುತ್ತಿದೆ.

ಹೀಗಾಗಿ ಟೀಂ ಇಂಡಿಯಾವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆ ಉದ್ಭವಿಸಿದೆ. ಹೀಗಾಗಿ ನಾಯಕತ್ವಕ್ಕೆ ಕೆಎಲ್ ರಾಹುಲ್, ಶಿಖರ್ ಧವನ್ ನಡುವೆ ಪೈಪೋಟಿ ಏರ್ಪಟ್ಟಿದೆ.

ಈ ಪೈಕಿ ನಾಯಕರಾಗಿ ಕೆಎಲ್ ರಾಹುಲ್ ಗೆ ಹೆಚ್ಚಿನ ಅನುಭವವಿದೆ. ಹೀಗಾಗಿ ಅವರೇ ನಾಯಕರಾಗುವ ಸಾಧ್ಯತೆ ಇದೆ.

ರಿಷಬ್ ಪಂತ್ ಕೂಡಾ ರೇಸ್ ನಲ್ಲಿರಲಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ನಾಯಕರಾಗಿ ಅನುಭವ ಪಡೆದಿರುವ ರಿಷಬ್ ಗೆ ಭವಿಷ್ಯದ ದೃಷ್ಟಿಯಿಂದ ನಾಯಕತ್ವ ಕೊಟ್ಟರೂ ಅಚ್ಚರಿಯಿಲ್ಲ.