ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಶಾಸಕ ತನ್ವೀರ್ ಸೇಠ್ ಪತ್ರ: ಕಾರಣವೇನು ಗೊತ್ತೆ…?.

ಮೈಸೂರು,ಮೇ,18,2021(www.justkannada.in): ಮೈಸೂರಿನಲ್ಲಿ ಆಕ್ಸಿಜನ್ ಬಸ್ ಸೇವೆ ಆರಂಭಿಸಿ. ಅವಶ್ಯಕತೆ ಇರುವ ಕೊರೋನಾ ಸೋಂಕಿತರಿಗೆ ಆಕ್ಸಿಜನ್ ಬಸ್ ಸೇವೆ ನೀಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಗೆ ಪತ್ರ ಬರೆದು ಎನ್.ಆರ್.ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಆಗ್ರಹಿಸಿದ್ದಾರೆ.jk

ಈ ಕುರಿತು ಪತ್ರ ಬರೆದಿರುವ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್, ಕೊರೊನಾ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳಿ. ವೈದ್ಯಕೀಯ ವಸ್ತುಗಳ ಖರೀದಿಗೆ ವಿನಾಯಿತಿ ನೀಡಬೇಕು. ಜತೆಗೆ ಔಷಧಿ, ಚುಚ್ಚುಮದ್ದು ಸಮರ್ಪಕ ಸರಬರಾಜಿಗೆ ಆದ್ಯತೆ ನೀಡಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.start-oxygen-bus-service-mysore-mla-tanvir-sait-letter-incharge-minister

ಹಾಗೆಯೇ ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಕ್ಸಿನೇಷನ್‌ ಬಗ್ಗೆ ಅರಿವು ಮೂಡಿಸಬೇಕು. ಆಶಾಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಈ ಕೆಲಸ ಮಾಡಲಿ. ಅಲ್ಲದೇ ಜಿಲ್ಲೆಯಲ್ಲಿ ತುರ್ತುವಾಹನಗಳ ಸಂಖ್ಯೆಯನ್ನ ಹೆಚ್ಚಿಸಬೇಕು. ತಜ್ಞರ ಸಮಿತಿ ರಚನೆ ಮಾಡಿ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಿಸಿ ಎಂದು ಶಾಸಕ ತನ್ವೀರ್ ಸೇಠ್ ತಿಳಿಸಿದ್ದಾರೆ.

Key words: Start –Oxygen- Bus Service – Mysore- MLA -Tanvir Sait- letter -incharge minister