Saturday, August 8, 2026

BDA Apartments

Home Front Page ‘ಧೈರ್ಯವಿದ್ದರೆ ನನ್ನನ್ನೂ ಬಂಧಿಸಿ’ : ಕೇಂದ್ರದ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ನೇತೃತ್ವದಲ್ಲಿ ಪ್ರತಿಭಟನೆ….

‘ಧೈರ್ಯವಿದ್ದರೆ ನನ್ನನ್ನೂ ಬಂಧಿಸಿ’ : ಕೇಂದ್ರದ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ನೇತೃತ್ವದಲ್ಲಿ ಪ್ರತಿಭಟನೆ….

ಮೈಸೂರು,ಮೇ,19,2021(www.justkannada.in):  ಕೋವಿಡ್ ಲಸಿಕೆ ರಫ್ತು ಕ್ರಮವನ್ನು ಪ್ರಶ್ನಿಸಿ ಪ್ರಧಾನಿ ಮೋದಿ,  ಕೇಂದ್ರ ಸರ್ಕಾರದ ವಿರುದ್ಧ ಭಿತ್ತಿಪತ್ರ ಹಾಕಿದ್ದವರನ್ನು ಬಂಧಿಸಿರುವುದನ್ನು ಖಂಡಿಸಿ ಮೈಸೂರಿನಲ್ಲಿ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.jk

ನಗರದ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ನೇತೃತ್ವದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು. ನನ್ನನ್ನೂ ಬಂಧಿಸಿ ಎಂಬ ಪೋಸ್ಟರ್ ಹಿಡಿದು ಕೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರಧಾನಿ ಮೋದಿ ಅವರ ವಿರುದ್ಧ ಟೀಕಾತ್ಮಕ ಭಿತ್ತಿಪತ್ರ ಹಾಕುವುದು ಅಪರಾಧವೇ.? ಕೋವಿಡ್ ಲಸಿಕೆಗಳನ್ನು ರಫ್ತು ಮಾಡಿದ ಕ್ರಮದ ವಿರುದ್ಧ ನಾವು ಕಠಿಣವಾಗಿ ಪ್ರಶ್ನಿಸುತ್ತೇವೆ. ಧೈರ್ಯವಿದ್ದರೆ ನನ್ನನ್ನೂ ಬಂಧಿಸಿ ಎಂದು ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ವಕ್ತಾರ ಎಂ.ಲಕ್ಮಣ್ ಸವಾಲು ಹಾಕಿದರು.

Key words: Protest -led – KPCC spokesman -M Laxman.