ಎರಡು ಬಾರಿ ಸಿಎಂ ಆದ್ರೂ ಅವಧಿ ಪೂರ್ಣಗೊಳಿಸಲಿಲ್ಲ ಎಂಬ ಹತಾಶೆಯಿಂದ ಹೆಚ್.ಡಿಕೆ ಆರೋಪ- ಶಾಸಕ ಎಂ.ಪಿ ರೇಣುಕಾಚಾರ್ಯ ತಿರುಗೇಟು.

ಬೆಂಗಳೂರು,ಅಕ್ಟೋಬರ್,12,2021(www.justkannada.in):  ಬಿಎಸ್ ವೈ ಆಪ್ತರ ಮೇಲಿನ ಐಟಿ ದಾಳಿ ರಾಜಕೀಯ ಪ್ರೇರಿತ  ಎಂಬ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ, ಎರಡು ಬಾರಿ ಮುಖ್ಯಮಂತ್ರಿಯಾದರೂ ಅವಧಿ ಪೂರ್ಣಗೊಳಿಸಲಿಲ್ಲ ಎಂಬ ಹತಾಶೆಯಿಂದ ಎಚ್.ಡಿ.ಕುಮಾರಸ್ವಾಮಿ ಆರೋಪ ಮಾಡುತ್ತಿದ್ದಾರೆ ಎಂದು ಟಾಂಗ್ ನೀಡಿದರು.

ಈ ಕುರಿತು ಇಂದು ಮಾತನಾಡಿದ ಶಾಸಕ ಎಂ.ಪಿ ರೇಣುಕಾಚಾರ್ಯ, ರಾಜಕೀಯವಾಗಿ ಬಿಎಸ್ ಯಡಿಯೂರಪ್ಪ ಅವರ ಆಪ್ತರ ಮನೆಗಳ ಮೇಲೆ ಐಟಿ ದಾಳಿ ಆಗಿದೆ ಎಂದು ಹೇಳುವುದು ಸರಿಯಲ್ಲ. ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಿಲ್ಲ. ಅವರ ರಾಜ್ಯ ಪ್ರವಾಸಕ್ಕೆ ಕಡಿವಾಣ ಹಾಕಿಲ್ಲ. ಯಡಿಯೂರಪ್ಪ ಅವರೇ ಬಿಜೆಪಿ ತಂಡದಲ್ಲಿ ಕೆಲಸ ಮಾಡಿ ಮತ್ತೆ ಅಧಿಕಾರ ತರುವ ಸಂಕಲ್ಪ ಮಾಡಿದ್ದಾರೆ ಎಂದು ಹೇಳಿದರು.

ಕೋವಿಡ್ ಹಿನ್ನೆಲೆಯಲ್ಲಿ ಸ್ಥಗಿತವಾಗಿದ್ದ ಗ್ರಾಮವಾಸ್ತವ್ಯ ಕಾರ್ಯಕ್ರಮಕ್ಕೆ ಇದೇ 16ರಂದು ಕಂದಾಯ ಸಚಿವ ಆರ್.ಅಶೋಕ್ ಚಾಲನೆ ನೀಡಲಿದ್ದಾರೆ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಾವಣಗೆರೆ ಜಿಲ್ಲೆ ನ್ಯಾಮತಿ ತಾಲ್ಲೂಕಿನ ಪುರಹೊನ್ನೆ ಗ್ರಾಮದಲ್ಲಿ ಅ.16ರಂದು ಬೆಳಗ್ಗೆ 10.30ಕ್ಕೆ ಕಂದಾಯ ಸಚಿವರು ಗ್ರಾಮ ವಾಸ್ತವ್ಯಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

Key words: HDK – CM – not completed – term-MLA- MP Renukacharya