Sunday, August 23, 2026

BDA Apartments

Home Front Page ಅನಾಚಾರವೆಂಬುದು ಬಿಜೆಪಿ ಕಾಯಕ: ನಿಮ್ಮ ನಾಯಕರ ಲೀಲೆಗಳು ಜನರಿಗೆ ಗೊತ್ತಿಲ್ಲ ಎನ್ನುವ ದರ್ಪವೇ?- ಟ್ವೀಟ್ ಮೂಲಕ...

ಅನಾಚಾರವೆಂಬುದು ಬಿಜೆಪಿ ಕಾಯಕ: ನಿಮ್ಮ ನಾಯಕರ ಲೀಲೆಗಳು ಜನರಿಗೆ ಗೊತ್ತಿಲ್ಲ ಎನ್ನುವ ದರ್ಪವೇ?- ಟ್ವೀಟ್ ಮೂಲಕ ಕುಟುಕಿದ ಜೆಡಿಎಸ್.

ಬೆಂಗಳೂರು,ಅಕ್ಟೋಬರ್,19,2021(www.justkannada.in): ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿದವರು ಯಾವ ಪಕ್ಷದವರು? ಸಿಡಿ ಸುಳಿಯಲ್ಲಿ ಸಿಕ್ಕಿ ರಾಜೀನಾಮೆ ಕೊಟ್ಟ ಶೀಲವಂತರು ಯಾವ ಪಕ್ಷದವರು? ನಿಮ್ಮ ನಾಯಕರ ಲೀಲೆಗಳು ಜನರಿಗೆ ಗೊತ್ತಿಲ್ಲ ಎನ್ನುವ ದರ್ಪವೇ? ಅನಾಚಾರವೆಂಬುದು ಬಿಜೆಪಿ ಕಾಯಕ, ಅಭ್ಯಾಸ, ನಿತ್ಯದ ದಿನಚರಿ ಮತ್ತು ಚಾಳಿ ಎಂದು ರಾಜ್ಯ ಜೆಡಿಎಸ್ ಘಟಕ ಬಿಜೆಪಿಗೆ ಟಾಂಗ್ ನೀಡಿದೆ.

ಸರಣಿ ಟ್ವೀಟ್ ಮಾಡಿ ಬಿಜೆಪಿ ನಾಯಕರನ್ನ ಕುಟುಕಿದ ಜೆಡಿಎಸ್, ಸ್ವಯಂ ಘೋಷಿತ ಸೇವಾ ಸಂಸ್ಥೆ ಅರ್ ಎಸ್ ಎಸ್ ಬಗ್ಗೆ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರು ಎತ್ತಿದ ಪ್ರಶ್ನೆಗಳಿಗೆ ಉತ್ತರ ಹೇಳುವ ಬದಲು ಸತ್ಯವ್ನನು ದಾಟಿಸುವ ಹುನ್ನಾರದೊಂದಿಗೆ ಬಿಜೆಪಿಯು ದಾಸರ ಪದಗಳನ್ನು ಹೇಳುತ್ತಾ ಜನರ ದಿಕ್ಕು ತಪ್ಪಿಸುತ್ತಿದೆ.

ಸಮಾಜದ ಉದ್ಧಾರಕ್ಕಾಗಿ ದಾಸಶ್ರೇಷ್ಠರು ಬರೆದ ಕೃತಿಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಹೀನ ಕೆಲಸವನ್ನು ಬಿಜೆಪಿ ಮಾಡುತ್ತಿದೆ. “ಆಚಾರವಿಲ್ಲದ ನಾಲಿಗೆ, ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ” ಎನ್ನುವುದು ಬಿಜೆಪಿಯ ಎಲುಬಿಲ್ಲದ ನಾಲಿಗೆಯ ಸಂಸ್ಕಾರವನ್ನು ಸಾರುತ್ತಿದೆ ಎಂದು ಕಿಡಿಕಾರಿದೆ.

ಹೇಳುವುದು ಆಚಾರ, ಮಾಡುವುದು ಅನಾಚಾರ. ಜನರಿಗೆ ಗೊತ್ತಿದೆ ನಿಮ್ಮ ಸದಾನಂದ ಪರಿವಾರ. ರಾಜ್ಯದಲ್ಲಿ ಭ್ರಷ್ಟಾಚಾರ ಎಸಗಿ ಜೈಲಿಗೆ ಹೋಗಿ ಇತಿಹಾಸ ಸೃಷ್ಠಿಸಿದ ಮುಖ್ಯಮಂತ್ರಿ ಯಾವ ಪಕ್ಷದವರು? ಅವರ ಹಿಂದೆಯೇ ಹಿಂಡು ಹಿಂಡಾಗಿ ಜೈಲು ಕಂಬಿ ಎಣಿಸಿದ ಸಚಿವ ಶಿಖಾಮಣಿಗಳು ಯಾವ ಪಕ್ಷದವರು? ಎಂದು ಬಿಜೆಪಿಗೆ ಜೆಡಿಎಸ್ ಪ್ರಶ್ನಿಸಿದೆ.

ಕುಮಾರಸ್ವಾಮಿ ಅವರು ಆರ್ ಎಸ್ ಎಸ್ ತರಬೇತಿ ನೀಡಿದ ಅಧಿಕಾರಿಗಳ ಬಗ್ಗೆ ಹೇಳಿದ್ದರೆ, ನೀವು ಯು.ಪಿ.ಎಸ್.ಸಿ ಗೆ ಸಮೀಕರಣ ಮಾಡಿ ಕೆ.ಪಿ.ಎಸ್.ಸಿ ಬಗ್ಗೆ ಎಗ್ಗಿಲ್ಲದೆ ಸುಳ್ಳು ಹೇಳುತ್ತಿದ್ದೀರಿ. ಸಾಂವಿಧಾನಿಕ ಸಂಸ್ಥೆಗಳನ್ನು ಗುಲಾಮರಂತೆ ಮಾಡಿಕೊಂಡಿರುವ ನಿಮಗೆ ಕೆ.ಪಿ.ಎಸ್.ಸಿ ಬಗ್ಗೆ ಮಾತನಾಡುವ ನೈತಿಕತೆ ಇದೆಯಾ?

ಕುಮಾರಸ್ವಾಮಿ ಅವರೆಂದೂ ಕೆ.ಪಿ.ಎಸ್.ಸಿ ಯನ್ನು ದುರುಪಯೋಗ ಮಾಡಿಕೊಂಡಿಲ್ಲ. 2011ರಲ್ಲಿ ಪಾಸಾಗಿ ಅನ್ಯಾಯಕ್ಕೆ ಒಳಗಾದ ಹಳ್ಳಿ ರೈತರ ಮಕ್ಕಳ ಪರ ಹೋರಾಟ ನಡೆಸಿದ್ದಾರೆ. ನಿಮ್ಮ ಹಾಗೆ ಗರ್ಭಗುಡಿ ಸಂಸ್ಕೃತಿ ಅವರದಲ್ಲ. ಮನೆ ಬಾಗಿಲಿಗೆ ಬಂದು ಸಹಾಯ ಕೇಳುವ ಯಾರನ್ನೂ ಸೊಕ್ಕಿನಿಂದ ಆಚೆಗಟ್ಟಿದವರಲ್ಲ. ನಿಮಗೆ ಆ ಮಾನವೀಯತೆ ಹೇಗೆ ಗೊತ್ತಾಗಬೇಕು?

ಕೆ.ಪಿ.ಎಸ್.ಸಿ ಯನ್ನು ಹಾಳು ಮಾಡಿದ್ದು ಯಾರು? ಇದೇ ಕಾಂಗ್ರೆಸ್ ಮತ್ತು ಬಿಜೆಪಿ ಸರಕಾರಗಳು. ಬಿಡಿಎಯಲ್ಲಿ ತಿಂದು ತೇಗಿದವರನ್ನು ಕೆ.ಪಿ.ಎಸ್.ಸಿ ಗೆ ತಂದು ಕೂರಿಸಿದ್ದು ಯಾರೆಂಬುದು ಗೊತ್ತಿಲ್ಲವೆ? ಮಾಡೋದು ಅನಾಚಾರ, ಮನೆ ಮುಂದೆ ಬೃಂದಾವನ ಎನ್ನುವ ಹಾಗಿದೆ ಬಿಜೆಪಿ ವರಸೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದೆ.

Key words: jds-BJP-congress- tweet