ನಾಡೋಜ ಬರಗೂರು ಪ್ರತಿಷ್ಠಾನ ನೀಡುವ ಪ್ರಶಸ್ತಿಗೆ ನಿರ್ದೇಶಕ ಗಿರೀಶ್ ಕಾಸರವಳ್ಳಿ ಆಯ್ಕೆ

ಬೆಂಗಳೂರು, ಅಕ್ಟೋಬರ್ 19, 2021 (www.justkannada.in): ಬೆಂಗಳೂರಿನ ನಾಡೋಜ ಬರಗೂರು ಪ್ರತಿಷ್ಠಾನ ನೀಡುವ ಬರಗೂರು ಪ್ರಶಸ್ತಿಗೆ ನಿರ್ದೇಶಕ ಗಿರೀಶ್ ಕಾಸರವಳ್ಳಿ ಆಯ್ಕೆಯಾಗಿದ್ದಾರೆ.

ನಾಡೋಜ ಬರಗೂರು ಪ್ರತಿಷ್ಠಾನವು ಸಾಹಿತ್ಯ ಮತ್ತು ಸಿನಿಮಾದಲ್ಲಿ ಸಾಧನೆ ಮಾಡಿದ ಒಬ್ಬರಿಗೆ ಪ್ರತಿ ವರ್ಷವೂ ಪ್ರಶಸ್ತಿಗಳನ್ನು ನೀಡುತ್ತಿದೆ.

ಈಗ 2020 ಮತ್ತು 2021ನೇ ಸಾಲಿನ ಬರಗೂರು ಪ್ರಶಸ್ತಿ ಪುರಸ್ಕೃತರ ಹೆಸರುಗಳನ್ನು ಪ್ರಕಟಿಸಿದೆ. ಇನ್ನು ಕನ್ನಡ ಸಿನಿಮಾ ಕ್ಷೇತ್ರಕ್ಕೆ ಅಂತಾರಾಷ್ಟ್ರೀಯ ಖ್ಯಾತಿಯನ್ನು ತಂದುಕೊಟ್ಟ ಗಿರೀಶ್ ಕಾಸರವಳ್ಳಿ, ಕನ್ನಡ ಸಾಹಿತ್ಯಕ್ಕೆ ತಮ್ಮದೇ ಆದ ವಿಶಿಷ್ಟ ಕೊಡುಗೆ ನೀಡಿದ ಸಾರಾ ಅಬೂಬಕರ್ ಅವರು 2020ರ ಬರಗೂರು ಪ್ರಶಸ್ತಿ’ಗೆ ಭಾಜನರಾಗಿದ್ದಾರೆ.

ಬರಗೂರು ಪ್ರಶಸ್ತಿಯು ತಲಾ 25 ಸಾವಿರ ರೂಪಾಯಿಗಳನ್ನು ಒಳಗೊಂಡಿದ್ದು, ಪ್ರಶಸ್ತಿ ಫಲಕದೊಂದಿಗೆ ಅಭಿನಂದಿಸಲಾಗುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭ ಇದೇ ಅಕ್ಟೋಬರ್ 30ರ ಸಂಜೆ ಬೆಂಗಳೂರಿನಲ್ಲಿ ನಡೆಯಲಿದೆ.