Saturday, August 15, 2026

BDA Apartments

Home Cinema ನಟ ಪುನೀತ್ ರಾಜ್ ಕುಮಾರ್ ಆರೋಗ್ಯ ಸ್ಥಿತಿ ಚಿಂತಾಜನಕ: ಭದ್ರತೆ ಹೆಚ್ಚಳಕ್ಕೆ ಬೆಂಗಳೂರಿನ ಎಲ್ಲಾ ಠಾಣೆಗಳಿಗೆ...

ನಟ ಪುನೀತ್ ರಾಜ್ ಕುಮಾರ್ ಆರೋಗ್ಯ ಸ್ಥಿತಿ ಚಿಂತಾಜನಕ: ಭದ್ರತೆ ಹೆಚ್ಚಳಕ್ಕೆ ಬೆಂಗಳೂರಿನ ಎಲ್ಲಾ ಠಾಣೆಗಳಿಗೆ ಸೂಚನೆ.

ಬೆಂಗಳೂರು,ಅಕ್ಟೋಬರ್,29,2021(www.justkannada.in):  ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿರುವ ಹಿನ್ನೆಲೆ ಬೆಂಗಳೂರಿನಲ್ಲಿ ಭದ್ರತೆ ಹೆಚ್ಚಿಸುವಂತೆ ಸೂಚನೆ ನೀಡಲಾಗಿದೆ.

ಈ ಕುರಿತು ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾವಹಿಸಲು  ಭದ್ರತೆ ಹೆಚ್ಚಳ ಮಾಡುವಂತೆ ಬೆಂಗಳೂರಿನ ಎಲ್ಲಾ ಪೊಲೀಸ್ ಠಾಣೆಗೆ  ಸೂಚನೆ ನೀಡಲಾಗಿದೆ.

ನಟ ಶಿವರಾಜ್ ಕುಮಾರ್ ಅವರ ಜತೆ ಸಿಎಂ ಬಸವರಾಜ ಬೊಮ್ಮಾಯಿ ಕೆಲವೇ ಕ್ಷಣಗಳಲ್ಲಿ ಸುದ್ಧಿಗೋಷ್ಠಿ ನಡೆಸಲಿದ್ದು ಮಾಹಿತಿ ನೀಡಲಿದ್ದಾರೆ. ಇನ್ನು  ವಿಕ್ರಂ ಆಸ್ಪತ್ರೆಯ ಬಳಿ  ಅಭಿಮಾನಿಗಳ ದಂಡೇ ಆಗಮಿಸಿ ಕಣ್ಣೀರಿಡುತ್ತಿರುವ ದೃಶ್ಯ ಕಂಡು ಬಂದಿದೆ.

Key words:  Actor- Punith Raj Kumar – Notice – increase security -all stations -Bangalore.