Saturday, August 1, 2026

BDA Apartments

Home Front Page ಅತೃಪ್ತ ಶಾಸಕರು ಮಂಗಳವಾರ ಬೆಂಗಳೂರಿಗೆ…..

ಅತೃಪ್ತ ಶಾಸಕರು ಮಂಗಳವಾರ ಬೆಂಗಳೂರಿಗೆ…..

ಬೆಂಗಳೂರು,ಜು,27,2019(www.justkannada.in):   ಹಿಂದಿನ ಸಮ್ಮಿಶ್ರ ಸರ್ಕಾರದ ವಿರುದ್ದ ಅಸಮಾಧಾನಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಹೆಚ್.ಡಿ ಕುಮಾರಸ್ವಾಮಿ ಸರ್ಕಾರ ಪತನವಾಗಲು ಕಾರಣವಾದ ಅತೃಪ್ತ ಶಾಸಕರು ಮಂಗಳವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ರಾಜ್ಯದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿರುವ ಬಿ.ಎಸ್ ಯಡಿಯೂರಪ್ಪ ಸೋಮವಾರ ಬಹುಮತ ಸಾಬೀತು ಪಡಿಸಲಿದ್ದು, ಇದರ ಬೆನ್ನಲೇ ಅತೃಪ್ತರು ಮುಂಬೈನಿಂದ‌ ಬೆಂಗಳೂರಿಗೆ ಅಗಮಿಸಲಿದ್ದಾರೆ. ಅತೃಪ್ತ ಶಾಸಕರ ನಿರ್ಧಾರ ಸಾಕಷ್ಟು ಕುತೂಹಲ ಮೂಡಿಸಿದೆ.

ಮಂಗಳವಾರ ಬೆಂಗಳೂರಿಗೆ ಆಗಮಿಸುವ ಅತೃಪ್ತ ಶಾಸಕರು ಬುಧವಾರ ಸುದ್ದಿಗೋಷ್ಠಿ ನಡೆಸಿ ತಾವು ರಾಜೀನಾಮೆ ನೀಡಲು ಕಾರಣವೇನು. ಮತ್ತು ತಮ್ಮ ಮುಂದಿನ ನಡೆ ಇನ್ನಿತರ ವಿಚಾರಗಳನ್ನ ಬಹಿರಂಗಪಡಿಸಲಿದ್ದಾರೆ ಎನ್ನಲಾಗಿದೆ.

Key words: rebel MLAs -Bangalore -Tuesday.