Tuesday, August 18, 2026

BDA Apartments

Home Crime ಕಾಲುವೆಯಲ್ಲಿ ಕಾಲು ಜಾರಿಬಿದ್ದು ಯುವಕ ನೀರುಪಾಲು.

ಕಾಲುವೆಯಲ್ಲಿ ಕಾಲು ಜಾರಿಬಿದ್ದು ಯುವಕ ನೀರುಪಾಲು.

ಮೈಸೂರು,ಡಿಸೆಂಬರ್,1,2021(www.justkannada.in): ಕಾಲುವೆಯಲ್ಲಿ ಕೈ ಕಾಲು ತೊಳೆಯಲು ಹೋಗಿದ್ದ ಯುವಕ ಕಾಲುಜಾರಿ ಬಿದ್ದು  ನೀರು ಪಾಲಾದ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ ಗೌರಿಘಟ್ಟ ರಸ್ತೆಯ ಕಾಲುವೆ ಬಳಿ ಈ ಘಟನೆ ನಡೆದಿದೆ. ವೇಣುಗೋಪಾಲ‌(19) ನೀರು ಪಾಲಾದ ವಿದ್ಯಾರ್ಥಿ. ಪ್ರಥಮ ವರ್ಷದ ಬಿಎ ವಿದ್ಯಾರ್ಥಿಯಾಗಿದ್ದ ವೇಣುಗೋಪಾಲ್ ಕಾಲುವೆಯಲ್ಲಿ ಕೈಕಾಲು ತೊಳೆಯುಲು ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರುಪಾಲಾಗಿದ್ದಾನೆ.

ತಕ್ಷಣ ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವೇಣುಗೋಪಾಲ್ ಸಾವನ್ನಪ್ಪಿದ್ದಾನೆ. ಈ ಕುರಿತು ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: mysoire- young man –water-slips – canal-death