Wednesday, August 12, 2026

BDA Apartments

Home Front Page ಹರ್ಷ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಹಿಂದೂಪರ ಸಂಘಟನೆಗಳ ಪ್ರತಿಭಟನೆ: ಕಠಿಣ ಕ್ರಮಕ್ಕೆ ಒತ್ತಾಯ.

ಹರ್ಷ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಹಿಂದೂಪರ ಸಂಘಟನೆಗಳ ಪ್ರತಿಭಟನೆ: ಕಠಿಣ ಕ್ರಮಕ್ಕೆ ಒತ್ತಾಯ.

ಬೆಂಗಳೂರು,ಫೆಬ್ರವರಿ,23,2022(www.justkannada.in):  ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಖಂಡಿಸಿ ಇಂದು ರಾಜ್ಯಾದ್ಯಂತ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು ಹಂತಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಬೆಳಗಾವಿ, ಬಳ್ಳಾರಿ, ಹಾವೇರಿ, ಕೊಪ್ಪಳ,ಬಾಗಲಕೋಟೆ, ಯಾದಗಿರಿ, ರಾಮನಗರ, ಮೈಸೂರು, ವಿಜಯಪುರ, ತುಮಕೂರು ಹಾಸನ ಸೇರಿ ರಾಜ್ಯಾದ್ಯಂತ , ಭಜರಂಗದಳ, ವಿಎಚ್ ಪಿ ಸೇರಿ ಹಿಂದೂಪರ ಸಂಘಟನೆಗಳು ಧರಣಿ ನಡೆಸಿ ಹಂತಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಅವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ವಿಜಯಪುರದಲ್ಲಿ ಹಿಂದೂ ಸಂಘಟನೆ ಪರ ಮುಖಂಡರು ಲೈಸೆನ್ಸ್ ಗನ್ ಹಿಡಿದು ಪ್ರತಿಭಟನೆ ನಡೆಸಿದರು. ಹಿಂದೂಪರ ಸಂಘಟನೆ ಮುಖಂಡ ರಾಘು ಅಣ್ಣಗೇರಿ ಅವರು ಗನ್ ಹಿಡಿದು ಧರಣಿ ನಡೆಸಿದ್ದಾರೆಂಬ ಮಾಹಿತಿ ತಿಳಿದು ಬಂದಿದೆ.

Key words: Harsha-murder-case-protest