Saturday, August 15, 2026

BDA Apartments

Home Front Page ಜೆಡಿಎಸ್ ಮೈತ್ರಿ ಬಗ್ಗೆ ಬಹಿರಂಗ ಅಸಮಾಧಾನ: ಬಿಜೆಪಿ ಗೆದ್ದಿದ್ದಕ್ಕೆ ಅವರೇ ನೇರ ಕಾರಣ -ಮಾಜಿ ಸಿಎಂ...

ಜೆಡಿಎಸ್ ಮೈತ್ರಿ ಬಗ್ಗೆ ಬಹಿರಂಗ ಅಸಮಾಧಾನ: ಬಿಜೆಪಿ ಗೆದ್ದಿದ್ದಕ್ಕೆ ಅವರೇ ನೇರ ಕಾರಣ -ಮಾಜಿ ಸಿಎಂ ಸಿದ‍್ಧರಾಮಯ್ಯ.

ಮೈಸೂರು,ಜೂನ್,11,2022(www.justkannada.in): ಜೆಡಿಎಸ್ ಜೊತೆಗಿನ ಮೈತ್ರಿ ಬಗ್ಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದು ಜೆಡಿಎಸ್‌ ನವರ ಜೊತೆ ಹೋಗಿಯೇ ನಾವು ಕೆಟ್ಟಿದ್ದು ಎಂದು ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಇಂದು ಮಾತನಾಡಿದ ಸಿದ್ಧರಾಮಯ್ಯ, ಜೆಡಿಎಸ್ ಜೊತೆ ಅಂದು ಮೈತ್ರಿ ಮಾಡಿಕೊಂಡು ಕೆಟ್ಟವು. ಪಾರ್ಲಿಮೆಂಟ್ ಎಲೆಕ್ಷನ್‌ ನಲ್ಲಿ ಜೆಡಿಎಸ್ ಜೊತೆ ಹೊಗಿದ್ದಕ್ಕೆ ಕೆಟ್ಟಿದ್ದು ಎಂದು ಹೇಳಿದರು.

ರಾಜ್ಯಸಭೆಯಲ್ಲಿ ಬಿಜೆಪಿ ಗೆಲ್ಲೋದಕ್ಕೆ ಸಿದ್ದರಾಮಯ್ಯ ಕಾರಣ ಎಂಬ ಹೆಚ್‌ಡಿಕೆ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ಬಿಜೆಪಿ ಗೆಲ್ಲಲು ಅವರು ಕಾರಣ ಅಲ್ವಾ.? ಮೊದಲು ನಾವು ಅಭ್ಯರ್ಥಿ ಹಾಕಿದ್ದು, ಆ ನಂತರ ಅವರು ಅಭ್ಯರ್ಥಿ ಹಾಕಿದ್ದು. ಬಿಜೆಪಿ ಗೆಲ್ಲಬಾರದಿತ್ತು ಅನ್ನೋದಿದ್ರೆ ಅವರು ಕ್ಯಾಂಡೆಟ್ ಹಾಕಬಾರದಿತ್ತು. ದೇವೇಗೌಡರು ನಿಂತಾಗ ನಾವು ಕ್ಯಾಂಡಿಡೇಟ್ ಹಾಕಿದ್ವಾ.? ಇಲ್ಲ ತಾನೇ, ಅದೇ ರೀತಿ ಅವರು ಮಾಡಬೇಕಿತ್ತು. ಅವರು ಮುಖ್ಯಮಂತ್ರಿ ಆಗೋಕೆ ನಾವು ಸಪೋರ್ಟ್ ಮಾಡಿರ್ಲಿಲ್ವ. ನಾವು ಈ ಬಾರಿ ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿದ್ದವು ಬಿಜೆಪಿ ಗೆಲ್ಲಬಾರದು ಅನ್ನೊದಾಗಿದ್ರೆ ನಮಗೆ ಸಪೋರ್ಟ್ ಮಾಡಬೇಕಿತ್ತು. ಬಿಜೆಪಿ ಗೆಲ್ಲಲು ಅವರೇ ನೇರ ಕಾರಣ ಎಂದು ಸಿದ್ಧರಾಮಯ್ಯ ಗುಡುಗಿದರು.

Key words: JDS –alliance-BJP-victory-Former CM -Siddaramaiah.