Friday, August 21, 2026

BDA Apartments

Home Crime ಕಾರು ಮತ್ತು ಕೆಎಸ್ ಆರ್ ಟಿಸಿ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು.

ಕಾರು ಮತ್ತು ಕೆಎಸ್ ಆರ್ ಟಿಸಿ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು.

ತುಮಕೂರು,ಜೂನ್,20,2022(www.justkannada.in):  ಜಿಲ್ಲೆಯ ಗುಬ್ಬಿ ತಾಲ್ಲೂಕಿನ ದೊಡ್ಡಗುಣಿ ಸಮೀಪ  ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭಿವಿಸಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.

ಗಿರೀಶ್ (37) ವರ್ಷ ಮಾನ್ಯ (17)ವರ್ಷ ಮೃತಪಟ್ಟವರು. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರೇ ಹತ್ತಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ. ತುಮಕೂರು -ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಈ ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಗುಬ್ಬಿ ಸರ್ಕಾರಿ ಆಸ್ಪತ್ರೆ ಹಾಗೂ ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಗುಬ್ಬಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ ಕುರಿತು ಪ್ರಕರಣ ದಾಖಲಾಗಿದೆ.

Key words: accident -between -car – KSRTC-Two -deaths -on the spot.