Saturday, September 19, 2026

BDA Apartments

ಮಂತ್ರಿಗಿರಿ ಸಿಗದಿದ್ದಕ್ಕೆ ಸದನಕ್ಕೆ ಹೋಗುತ್ತಿಲ್ಲ-ನೇರವಾಗಿ ಅಸಮಾಧಾನ ಹೊರ...
Home Front Page ಮಂತ್ರಿಗಿರಿ ಸಿಗದಿದ್ದಕ್ಕೆ ಸದನಕ್ಕೆ ಹೋಗುತ್ತಿಲ್ಲ-ನೇರವಾಗಿ ಅಸಮಾಧಾನ ಹೊರ ಹಾಕಿದ ಕೆ.ಎಸ್ ಈಶ್ವರಪ್ಪ.

ಮಂತ್ರಿಗಿರಿ ಸಿಗದಿದ್ದಕ್ಕೆ ಸದನಕ್ಕೆ ಹೋಗುತ್ತಿಲ್ಲ-ನೇರವಾಗಿ ಅಸಮಾಧಾನ ಹೊರ ಹಾಕಿದ ಕೆ.ಎಸ್ ಈಶ್ವರಪ್ಪ.

ಶಿವಮೊಗ್ಗ,ಸೆಪ್ಟಂಬರ್,19,2022(www.justkannada.in):  ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಲೀನ್ ಚಿಟ್ ಪಡೆದ ಮೇಲೂ ಸಚಿವ ಸ್ಥಾನ ಸಿಗದಿದ್ದಕ್ಕೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ನೇರವಾಗಿಯೇ ಅಸಮಾಧಾನ ಹೊರ ಹಾಕಿದ್ದಾರೆ.

ಈ ಕುರಿತು ಮಾತನಾಡಿದ ಕೆ.ಎಸ್ ಈಶ್ವರಪ್ಪ, ಕ್ಲೀನ್ ಚಿಟ್ ಸಿಕ್ಕಿದರೂ  ಮಂತ್ರಿಗಿರಿ ಸಿಗದಿದ್ದಕ್ಕೆ ಅಸಮಾಧಾನವಿದೆ.  ಹೀಗಾಗಿ ನಾನು ಸದನಕ್ಕೆ ಹೋಗುತ್ತಿಲ್ಲ.  ಮುಚ್ಚುಮರೆ ಇಲ್ಲದೇ ಹೇಳತ್ತೀನಿ ಎಂದರು.ಮಂತ್ರಿಗಿರಿ ಸಿಗದಿದ್ದಕ್ಕೆ ಸದನಕ್ಕೆ ಹೋಗುತ್ತಿಲ್ಲ kse

ಸಂಪುಟಕ್ಕೆ ಸೇರಿಸಿಕೊಳ್ಳುವುದು ಬಿಡುವುದು ಕೇಂದ್ರದ ನಾಯಕರಿಗೆ ಬಿಟ್ಟಿದ್ದು  ನನಗೆ  ಕ್ಲೀನ್ ಚಿಟ್ ನೀಡಿದ ಮೇಲೂ ಸಚಿವ ಸ್ಥಾನ ನೀಡಲು ವಿಳಂಬವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

Key words: KS Eshwarappa – displeasure -not going -ministerial post.