Tuesday, August 4, 2026

BDA Apartments

Home Front Page ಮನ್ ಕಿ ಬಾತ್’ನಲ್ಲಿ ಹೊಸ ಘೋಷಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಮನ್ ಕಿ ಬಾತ್’ನಲ್ಲಿ ಹೊಸ ಘೋಷಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು, ಸೆಪ್ಟೆಂಬರ್ 25, 2022 (www.justkannada.in): ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ದ 93 ನೇ ಸಂಚಿಕೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದರು.

ಚಂಡೀಗಢ ವಿಮಾನ ನಿಲ್ದಾಣಕ್ಕೆ ಈಗ ಶಹೀದ್ ಭಗತ್ ಸಿಂಗ್ ಅವರ ಹೆಸರನ್ನು ಇಡಲು ನಿರ್ಧರಿಸಲಾಗಿದೆ ಎಂದು ಇದೇ ವೇಳೆ ಘೋಷಿಸಿದರು.

ಈ ದಿನದಂದು, ನಾವು ಭಾರತ ಮಾತೆಯ ಧೈರ್ಯಶಾಲಿ ಪುತ್ರ ಭಗತ್ ಸಿಂಗ್ ಅವರ ಜಯಂತಿಯನ್ನು ಆಚರಿಸಲಿದ್ದೇವೆ ಎಂದು ಪ್ರಧಾನಿ ಇದೇ ವೇಳೆ ತಿಳಿಸಿದರು.

ದೀನ್ ದಯಾಳ್ ಉಪಾಧ್ಯಾಯ ಸ್ಮರಣೆ: ದೀನ್ ದಯಾಳ್ ಉಪಾಧ್ಯಾಯ ಅವರು ದೇಶದ ಪ್ರಗತಿಯ ಪ್ರಮಾಣವು ಕೊನೆಯ ಹಂತದ ವ್ಯಕ್ತಿ ಎಂದು ಹೇಳುತ್ತಿದ್ದರು. ಸ್ವಾತಂತ್ರ್ಯದ ಅಮೃತ ಕಾಲದಲ್ಲಿ ದೀನದಯಾಳ್ ಜೀ ಅವರನ್ನು ನಾವು ಹೆಚ್ಚು ಹೆಚ್ಚು ತಿಳಿದುಕೊಂಡಷ್ಟೂ, ಅವರಿಂದ ನಾವು ಹೆಚ್ಚು ಹೆಚ್ಚು ಕಲಿಯುತ್ತೇವೆ ಎಂದರು.