Friday, August 21, 2026

BDA Apartments

Home Front Page ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ ಮಾಡಿದ್ರೆ ಕ್ರಮ- ಗೃಹ ಸಚಿವ ಪರಮೇಶ್ವರ್ ವಾರ್ನಿಂಗ್

ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ ಮಾಡಿದ್ರೆ ಕ್ರಮ- ಗೃಹ ಸಚಿವ ಪರಮೇಶ್ವರ್ ವಾರ್ನಿಂಗ್

ಬೆಂಗಳೂರು,ಏಪ್ರಿಲ್,6,2026 (www.justkannada.in): ಕಾಳ ಸಂತೆಯಲ್ಲಿ ಗ್ಯಾಸ್ ಮಾರಾಟ ಮಾಡಿದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಾರ್ನಿಂಗ್ ಕೊಟ್ಟರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕೇಂದ್ರ ಸರ್ಕಾರ ಗ್ಯಾಸ್ ಅನ್ನು  ಎಲ್ಲಾ ರಾಜ್ಯಗಳಿಗೆ ಕೊಡುವಂತೆ ನಮಗೂ ಕೊಡಲಿ. ನಮ್ಮ ರಾಜ್ಯದ ಜನರಿಗೂ ಗ್ಯಾಸ್ ಇಂಧನ ಬೇಕಲ್ಲವಾ? ಎಂದರು.

ಆಟೋಗಳಿಗೆ ಎಲ್ ಪಿಜಿ ಕೊಡಿಸುವ ಪ್ರಯತ್ನ ಮಾಡುತ್ತೇವೆ.  ಆಟೋ ಚಾಲಕರಿಗೆ ಆದ್ಯತೆ ಕೊಡುವಂತೆ ಸೂಚನೆ ನೀಡಿದ್ದೇನೆ.  ಖಾಸಗಿಯವರು ಹೆಚ್ಚು ಹಣ ವಸೂಲಿ ಮಾಡುತ್ತಿರುವುದು ಗೊತ್ತಿದೆ. ಏಪ್ರಿಲ್ 10 ರಂದು ಸಭೆ ನಡೆಸಿ ಸಮಸ್ಯೆ ಪರಿಹಾರ ಮಾಡುತ್ತೇವೆ. ಮಧ್ಯಾಹ್ನ ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ ಎಂದು ಪರಮೇಶ್ವರ್ ತಿಳಿಸಿದರು.

Key words: Action, gas, sold , Home Minister, Parameshwar