Wednesday, August 12, 2026

BDA Apartments

Home Cinema ಬಂಧನ ಭೀತಿ, ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಅಜಯ್ ರಾವ್

ಬಂಧನ ಭೀತಿ, ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಅಜಯ್ ರಾವ್

ಬೆಂಗಳೂರು, ಆಗಸ್ಟ್ 25, 2021 (www.justkannada.in): ನಟ ಅಜಯ್ ರಾವ್ ಈಗ ಬಂಧನ ವಾರಂಟ್ ಭೀತಿಯಲ್ಲಿದ್ದಾರೆ. ಈ ಹಿನ್ನಲೆಯಲ್ಲಿ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

ಫೈಟರ್ ವಿವೇಕ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಜಯ್ ರಾವ್ ಅವರಿಗೆ ಬಂಧನ ಆತಂಕ ಎದುರಾಗಿದೆ.

ಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಶಂಕರ್, ಫೈಟ್ ಮಾಸ್ಟರ್ ವಿನೋದ್, ಕ್ರೈನ್ ಅಪರೇಟರ್ ಮಹದೇವ್ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇದೀಗ ನಟ ಅಜೇಯ್ ಅವರನ್ನೂ ಪೊಲೀಸರು ಬಂಧಿಸುವ ಆತಂಕ ಎದುರಾಗಿದೆ. ಹೀಗಾಗಿ ಅವರು ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.