Sunday, August 9, 2026

BDA Apartments

Home Cinema ನಟ ದರ್ಶನ್ ಗೆ ಮಧ್ಯಂತರ ಜಾಮೀನು ಪ್ರಶ್ನಿಸಿ ಸದ್ಯದಲ್ಲೇ ಸುಪ್ರೀಂಕೋರ್ಟ್ ಗೆ ಮೇಲ್ಮನವಿ

ನಟ ದರ್ಶನ್ ಗೆ ಮಧ್ಯಂತರ ಜಾಮೀನು ಪ್ರಶ್ನಿಸಿ ಸದ್ಯದಲ್ಲೇ ಸುಪ್ರೀಂಕೋರ್ಟ್ ಗೆ ಮೇಲ್ಮನವಿ

ಬೆಂಗಳೂರು,ನವೆಂಬರ್, 15,2024 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಆರೋಪಿ ನಟ ದರ್ಶನ್ ಗೆ ಹೈಕೋರ್ಟ್ ಮಂಜೂರು ಮಾಡಿರುವ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ  ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಪೊಲೀಸ್ ಆಯುಕ್ತ ದಯಾನಂದ್ ಅವರು, ದರ್ಶನ್ ಗೆ ಮಧ್ಯಂತರ ಜಾಮೀನು ಪ್ರಶ್ನಿಸಿ ಮೇಲನವಿ ಸಲ್ಲಿಸಲು ಸರ್ಕಾರ ಅನುಮತಿ ನೀಡಿದೆ. ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಹಲವು ಪ್ರಕ್ರಿಯೆಗಳಿವೆ. ಹಾಗಾಗಿ ಸದ್ಯದಲ್ಲೇ ಮೇಲ್ಮನವಿ ಸಲ್ಲಿಸಲು ತಯಾರಿ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಪ್ರಕರಣ ಸಂಬಂಧ ಬೆನ್ನುನೋವಿನಿಂದ ಬಳಲುತ್ತಿರುವ ನಟ ದರ್ಶನ್ ಗೆ ಚಿಕಿತ್ಸೆಗಾಗಿ ಹೈಕೋರ್ಟ್ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

Key words: Actor, Darshan, interim bail, questioning, appeal, Supreme Court