Saturday, September 19, 2026

BDA Apartments

ನಟ ದರ್ಶನ್ ಮೇಲೆ ಚಪ್ಪಲಿ ಎಸೆತಕ್ಕೆ ನಟ ಶಿವರಾಜ್ ಕುಮಾರ್ ವಿಷಾದ BDA JK_Adv BDA Adv
Home Front Page ನಟ ದರ್ಶನ್ ಮೇಲೆ ಚಪ್ಪಲಿ ಎಸೆತಕ್ಕೆ ನಟ ಶಿವರಾಜ್ ಕುಮಾರ್ ವಿಷಾದ.

ನಟ ದರ್ಶನ್ ಮೇಲೆ ಚಪ್ಪಲಿ ಎಸೆತಕ್ಕೆ ನಟ ಶಿವರಾಜ್ ಕುಮಾರ್ ವಿಷಾದ.

ಬೆಂಗಳೂರು,ಡಿಸೆಂಬರ್,19,2022(www.justkannada.in): ನಟ  ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೇಲೆ ಚಪ್ಪಲಿ ಎಸೆತಕ್ಕೆ ಸಂಬಂಧಿಸಿದಂತೆ  ನಟ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ವಿಷಾದ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ನಟ ಶಿವಣ್ಣ, ನಿನ್ನೆ ಹೊಸಪೇಟೆಯಲ್ಲಿ ದರ್ಶನ್ ಅವರ ಮೇಲೆ ನಡೆದ ಕೃತ್ಯ ನನ್ನ ಮನಸ್ಸಿಗೆ ನೋವುಂಟು ಮಾಡಿದೆ. ಕಲಾವಿದರೆಲ್ಲ ಒಂದೇ ಕುಟುಂಬಕ್ಕೆ ಸೇರಿದವರು.  ಈ ರೀತಿಯ ಅಮಾನವೀಯ ಘಟನೆ ಒಂದೇ ಮನೆಯವರಂತಿರುವ ಎಲ್ಲರಿಗೂ ನೋವುಂಟು ಮಾಡುತ್ತದೆ. ಮನುಷ್ಯತ್ವ ಮರೆತು ಯಾರೂ ಈ ರೀತಿಯ ಕೃತ್ಯಗಳನ್ನು ನಡೆಸಬಾರದು ಎಂದು ವಿನಂತಿಸುತ್ತೇನೆ. ಅಭಿಮಾನದಿಂದ ಪ್ರೀತಿಯನ್ನು ತೋರಿ,  ದ್ವೇಷ ಅಗೌರವವನ್ನಲ್ಲ ಎಂದು ಬೇಸರ ವ್ಯಕ್ತಪಡಿಸಿದರು.ನಟ ದರ್ಶನ್ ಮೇಲೆ ಚಪ್ಪಲಿ ಎಸೆತಕ್ಕೆ ನಟ ಶಿವರಾಜ್ ಕುಮಾರ್ ವಿಷಾದ shivaraj kumar

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕ್ರಾಂತಿ ಚಿತ್ರ ಜನವರಿಯಲ್ಲಿ ಬಿಡುಗಡೆಯಾಗುತ್ತಿದ್ದು, ಚಿತ್ರದ ಪ್ರಚಾರದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ.  ಈ ಮಧ್ಯೆ ಹೊಸಪೇಟೆಯಲ್ಲಿ ನಡೆದ ಕಾರ್ಯಕ್ರಮದ ವೇಳೆ ನಟ ದರ್ಶನ್ ಮೇಲೆ ದುಷ್ಕರ್ಮಿಗಳು ಚಪ್ಪಲಿ ಎಸೆದ ಘಟನೆ ನಡೆದಿತ್ತು.

Key words: Actor- Shivaraj Kumar –regrets-shoe -actor -Darshan.