ಲಂಡನ್’ನಿಂದ ಬೆಂಗಳೂರಿಗೆ ಹಿಂದಿರುಗಿದ ಹ್ಯಾಟ್ರಿಕ್ ಹೀರೋ

ಬೆಂಗಳೂರು, ಜುಲೈ 24, 2019 (www.justkannada.in): ಚಿಕಿತ್ಸೆಗಾಗಿ ಲಂಡನ್ ಗೆ ತೆರಳಿದ್ದ ನಟ ಶಿವರಾಜ್ ಕುಮಾರ್ ನಿನ್ನೆ ಬೆಂಗಳೂರಿಗೆ ಮರಳಿ ಬಂದಿದ್ದಾರೆ.

ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದ ಶಿವಣ್ಣನನ್ನು ಅದ್ದೂರಿಯಾಗಿ ಅವರ ಅಭಿಮಾನಿಗಳು ಸ್ವಾಗತ ಮಾಡಿದ್ದಾರೆ.

ಭುಜದ ನೋವಿನಿಂದ ಬಳಲುತ್ತಿದ್ದ ಶಿವರಾಜ್ ಕುಮಾರ್ ಚಿಕಿತ್ಸೆ ಪಡೆಯಲು ಲಂಡನ್ ಗೆ ತೆರಳಿದ್ದರು. ಜುಲೈ 10 ರಂದು ಅವರಿಗೆ ಯಶಸ್ವಿಯಾಗಿ ಸರ್ಜರಿ ಮಾಡಲಾಗಿತ್ತು.