ನಟ ವಿಕ್ರಮ್’ಗೆ ಹೃದಯಾಘಾತ: ಚೆನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ.

ಬೆಂಗಳೂರು, ಜುಲೈ 08, 2022 (www.justkannada.in): ನಟ ವಿಕ್ರಮ್ ಅವರಿಗೆ ಹೃದಯಾಘಾತವಾಗಿದ್ದು, ಚೆನ್ನೈ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವಿಕ್ರಂ ಅವರಿಗೆ ತಮಿಳು ಹಾಗೂ ತೆಲುಗಿನಲ್ಲೂ ಲಕ್ಷಾಂತರ ಅಭಿಮಾನಿಗಳಿದ್ದಾರೆ. ತಮ್ಮ ನೆಚ್ಚಿನ ನಟನಿಗೆ ಹೃದಯಾಘಾತವಾಗಿರುವ ಸುದ್ದಿ ಕೇಳಿ ಆತಂಕಗೊಂಡಿದ್ದಾರೆ.

ಕಾಲಿವುಡ್​ನಲ್ಲಿ ಮೊದಲಿನಿಂದಲೂ ಸಖತ್​ ಫಿಟ್​ ಅಂಡ್ ಫೈನ್​ ಆಗಿದ್ದವರು ಚಿಯಾನ್​ ವಿಕ್ರಮ್​. ಇಂದು ಬೆಳಗ್ಗೆ ಎಂದಿನಂತೆ ತಮ್ಮ ಕೆಲಸ ಮಾಡುತ್ತಿದ್ದರು. ಇದ್ದಕಿದ್ದ ಹಾಗೇ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಚೈನ್ನೈನ ಪ್ರತಿಷ್ಠಿತ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸದ್ಯಕ್ಕೆ ವಿಕ್ರಮ್​ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ನುರಿತ ವೈದ್ಯರು ವಿಕ್ರಮ್​ಗೆ ಚಿಕಿತ್ಸೆ ನೀಡುತ್ತಿದ್ದಾರೆ.