ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರ: ಸಂಸದ ಡಿ.ಕೆ ಸುರೇಶ್ ಅಸಮಾಧಾನ.

ಬೆಂಗಳೂರು,ಜನವರಿ,11,2024(www.justkannada.in): ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆಗೆ ಬೇಡಿಕೆ ಇಟ್ಟಿರುವ  ಸಚಿವರ ವಿರುದ್ದ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಸುರೇಶ್,  ಹೆಚ್ಚುವರಿ ಡಿಸಿಎಂ ವಿಷಯದ ಬಗ್ಗೆ ಎಐಸಿಸಿ ಅಧ್ಯಕ್ಷರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಅಧ್ಯಕ್ಷರು ನಮ್ಮ ರಾಜ್ಯದವರೇ ಆಗಿರುವ ಕಾರಣ ಅವರಿಗೆ ಇರುಸು ಮುರುಸು ಉಂಟು ಮಾಡುವ ಪ್ರಯತ್ನವನ್ನು ಕೆಲವರು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಡಿ.ಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಐವರು ಕಾರ್ಯಾಧ್ಯಕ್ಷರೊಂದಿಗೆ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ, ಎಲ್ಲ 30 ಸಚಿವರನ್ನು ಉಪಮುಖ್ಯಮಂತ್ರಿಗಳನ್ನಾಗಿ ನೇಮಕ ಮಾಡಿದರೂ ತೊಂದರೆ ಇಲ್ಲ, ಅದರೆ ಹೆಚ್ಚುವರಿ ಡಿಸಿಎಂಗಳ ಬೇಡಿಕೆ ಮುಂದಿಡುತ್ತಾ ಎಐಸಿಸಿ ಅಧ್ಯಕ್ಷರಿಗೆ ಮಾಡುತ್ತಿರುವ ಅವಮಾನ ನಿಲ್ಲಬೇಕು ಎಂದು ಹೇಳಿದರು.

Key words: Additional-DCM-post- issue- MP DK Suresh