ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ ಒಪ್ಪಿ, ಷರತ್ತು ಹಾಕದೆ ಬಂದ್ರೆ ಸ್ವಾಗತ -ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಆಗಸ್ಟ್,19,2023(www.justkannada.in): ವಲಸಿಗರು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ,  ಪಕ್ಷದ ತತ್ವ ಸಿದ್ಧಾಂತ ಒಪ್ಪಿ, ಷರತ್ತು ಹಾಕದೆ ಬಂದರೆ ಸ್ವಾಗತ ಎಂದಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ನಾವು ಆಪರೇಷನ್ ಹಸ್ತ ಮಾಡಲು ಹೊರಟಿಲ್ಲ. ಬಿಜೆಪಿ, ಜೆಡಿಎಸ್​​​​ ಪಕ್ಷ ಒಡೆಯಲು ಹೋಗುತ್ತಿಲ್ಲ. ಯಾರ ಅಸ್ತಿತ್ವ ಏನು ಅಂತಾ ಜನರೇ ತೋರಿಸಿಕೊಟ್ಟಿದ್ದಾರೆ. ಬಿಜೆಪಿ, ಜೆಡಿಎಸ್ ತನ್ನ ಅಸ್ತಿತ್ವ ಕಾಪಾಡಿಕೊಂಡು ಹೋಗಲಿ ಎಂದು ಟಾಂಗ್ ನೀಡಿದರು.

Key words: Agreeing – principle – Congress – welcome -Minister -Priyank Kharge