ದೇಶದಲ್ಲಿ ವಾಯು ಮಾಲಿನ್ಯ ಹೆಚ್ಚಳ: ಮಾನದಂಡ ಪರಿಷ್ಕರಿಸಲು ಕಾಂಗ್ರೆಸ್ ಸಲಹೆ

ಬೆಂಗಳೂರು, ನವೆಂಬರ್ 03, 2023 (www.justkannada.in): ವಾಯುಮಾಲಿನ್ಯ ಕಾಯ್ದೆ ಮತ್ತು ವಾಯು ಗುಣಮಟ್ಟದ ಮಾನದಂಡಗಳನ್ನು ಪರಿಷ್ಕರಿಸಲು ಕಾಂಗ್ರೆಸ್ ಸಲಹೆ ನೀಡಿದೆ.

ರಾಷ್ಟ್ರ ರಾಜಧಾನಿ ಮತ್ತು ದೇಶದ ಇತರ ಭಾಗಗಳಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯ ಹೆಚ್ಚಾಗುತ್ತಿರುವುದನ್ನು ಮನಗಂಡು ಕಾಂಗ್ರೆಸ್ ಈ ಬೇಡಿಕೆ ಮುಂದಿಟ್ಟಿದೆ.

ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಕೆಲ ಸಲಹೆ ನೀಡಿದ್ದಾರೆ. ವಾಯು ಮಾಲಿನ್ಯ ಕಾಯಿದೆಯು 1981 ರಲ್ಲಿ ಅಸ್ತಿತ್ವಕ್ಕೆ ಬಂದಿತು. ನಂತರ, ಸುತ್ತುವರಿದ ವಾಯು ಗುಣಮಟ್ಟದ ಮಾನದಂಡಗಳನ್ನು ಏಪ್ರಿಲ್ 1994 ರಲ್ಲಿ ಘೋಷಿಸಲಾಯಿತು ಮತ್ತು ನಂತರ ಅಕ್ಟೋಬರ್ 1998 ರಲ್ಲಿ ಪರಿಷ್ಕರಿಸಲಾಯಿತು. ಇದನ್ನು ಮತ್ತೆ ಪರಿಷ್ಕರಿಸಬೇಕೆಂದು ಸಲಹೆ ನೀಡಿದ್ದಾರೆ.

ದೇಶದಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದ ಬಗ್ಗೆ ಕಾಂಗ್ರೆಸ್ ಕಳವಳ ವ್ಯಕ್ತಪಡಿಸಿದೆ ಮತ್ತು ವಾಯುಮಾಲಿನ್ಯ ಕಾಯ್ದೆ ಮತ್ತು ವಾಯು ಗುಣಮಟ್ಟದ ಮಾನದಂಡಗಳನ್ನು ಪರಿಷ್ಕರಿಸಬೇಕೆಂದು ಹೇಳಿದೆ