Thursday, August 6, 2026

BDA Apartments

Home Crime ವಂಚನೆ ಪ್ರಕರಣ: ಐಶ್ವರ್ಯಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು

ವಂಚನೆ ಪ್ರಕರಣ: ಐಶ್ವರ್ಯಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು

ಬೆಂಗಳೂರು,ಜೂನ್,17,2025 (www.justkannada.in): ಪಿಎಂಎಲ್ ಎ ಪ್ರಕರಣದಲ್ಲಿ ಐಶ್ವರ್ಯಗೌಡಗೆ ಬೆಂಗಳೂರಿನ 1ನೇ ಸಿಸಿಎಚ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಇಡಿ ದಾಖಲಿಸಿದ್ದ ಪ್ರಕರಣದಲ್ಲಿ ಐಶ್ವರ್ಯಗೌಡಗೆ ಬೆಂಗಳೂರಿನ 1ನೇ ಸಿಸಿಎಚ್ ನ್ಯಾಯಾಲಯ ಷರತ್ತು ಬದ್ದ ಜಾಮೀನು ನೀಡಿದೆ. 5 ಲಕ್ಷ ಬಾಂಡ್, ಇಬ್ಬರ ಶೂರಿಟಿ ನೀಡಬೇಕು. ವಿಳಾಸ ಬದಲಾವಣೆ ಮಾಡಬಾರದು. ಬೆಂಗಳೂರು ಬಿಟ್ಟು ಹೋಗಬಾರದು ಎಂದು ಕೋರ್ಟ್ ಷರತ್ತು ವಿಧಿಸಿದೆ.

ಐಶ್ವರ್ಯ ಗೌಡ ಪರ ವಾದ ಮಂಡಿಸಿದ ಎಸ್. ಸುನೀಲ್ ಕುಮಾರ್, ಅನುಸೂಚಿತ ಪ್ರಕರಣವಿಲ್ಲದಿದ್ದರೂ ಇಡಿ ಬಂಧಿಸಿದೆ.  ಮಹಿಳೆಗೆ ಬಂಧನದಿಂದ ವಿಶೇಷ ವಿನಾಯಿತಿ ಇದೆ ಎಂದು ಹೇಳಿದರು.

ಮಾಜಿ ಸಂಸದ ಡಿ.ಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ಕೋಟ್ಯಾಂತರ ರೂ. ವಂಚನೆ ಮಾಡಿರುವ ಆರೋಪ ಐಶ್ವರ್ಯಗೌಡ ಮೇಲಿದೆ.vtu

Key words: Fraud case,  Aishwarya Gowda, conditional bail