Saturday, August 22, 2026

BDA Apartments

Home Front Page ಮಾರ್ಚ್ 13ರಿಂದ ಮೂರು ದಿನಗಳ ಕಾಲ ಅಖಿಲ ಭಾರತ ಜಾನಪದ ಮತ್ತು ಬುಡಕಟ್ಟು ಕಲೆ ಉತ್ಸವ...

ಮಾರ್ಚ್ 13ರಿಂದ ಮೂರು ದಿನಗಳ ಕಾಲ ಅಖಿಲ ಭಾರತ ಜಾನಪದ ಮತ್ತು ಬುಡಕಟ್ಟು ಕಲೆ ಉತ್ಸವ ಮತ್ತು ವಿಚಾರ ಸಂಕಿರಣ…

ಮೈಸೂರು,ಮಾ,3,2020(www.justkannada.in): ಮಾರ್ಚ್ 13ರಿಂದ ಮೂರು ದಿನಗಳ ಕಾಲ ಅಖಿಲ ಭಾರತ ಜಾನಪದ ಮತ್ತು ಬುಡಕಟ್ಟು ಕಲೆ ಉತ್ಸವ ಮತ್ತು ವಿಚಾರ ಸಂಕಿರಣವನ್ನ ಆಯೋಜಿಸಲಾಗಿದೆ.

ಅಖಿಲ ಭಾರತ ಜಾನಪದ ಮತ್ತು ಬುಡಕಟ್ಟು ಕಲಾ ಪರಿಷತ್ತು – ಕರ್ನಾಟಕ ಸಾಹಸ ಕಲಾ ಅಕಾಡೆಮಿ, ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯ , ಕರ್ನಾಟಕ ಜಾನಪದ ವಿಶ್ವ ವಿದ್ಯಾನಿಲಯ , ಗೊಟಗೋಡಿ , ಹಾವೇರಿ ಜಿಲ್ಲೆ | ಬುಡಕಟ್ಟು ಸಚಿವಾಲಯ ಇವರ ಸಂಯುಕ್ತಾಶ್ರಯದಲ್ಲಿ , ಅಖಿಲ ಭಾರತ ಜಾನಪದ ಮತ್ತು ಬುಡಕಟ್ಟು ಕಲೆ ಉತ್ಸವ ಮತ್ತು ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ.

ಈ ಕುರಿತು ಮೈಸೂರು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ  ಮೈಸೂರು ಉತ್ಸವ ಸಂಚಾಲಕ ಡಾ. ಕೆ ವಸಂತ ಕುಮಾರ್, ಮಾರ್ಚ್ 13 , 14 , 15 ರಂದು ಅನಿಲ ಭಾರತ ಜಾನಪದ ಮತ್ತು ಬುಡಕಟ್ಟು ಕಲಾ ಉತ್ಸವ ಮತ್ತು ವಿಚಾರ ಸಂಕಿರಣ ನಡೆಯಲಿದೆ. ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆಯೋಜನೆ ಮಾಡಲಾಗಿದೆ. ಉತ್ಸವದಲ್ಲಿ ದೇಶದ 18 ರಾಜ್ಯಗಳಿಂದ ಸುಮಾರು 300ಕ್ಕೂ ಹೆಚ್ಚು ಕಲಾವಿದರು , 60ಕ್ಕೂ ಹೆಚ್ಚು ವಿಷಯ ತಜ್ಞರು ವಿಚಾರಗಳನ್ನು ಮಂಡಿಸಲಿದ್ದಾರೆ. ಮುಂದಿನ ತಲೆಮಾರಿಗೆ ಜಾನಪದ ಮತ್ತು ಬುಡಕಟ್ಟು ಕಲೆಗಳನ್ನು ಪರಿಚಯಿಸಿ ಸಂರಕ್ಷಿಸಿ , ಸಂವರ್ಧಿಸುವ ಉದ್ದೇಶವನ್ನು ಈ ಉತ್ಸವ  ಹೊಂದಿದೆ .ಹಲವಾರು ಸಂಘಟನೆಗಳು ಈ ಉತ್ಸವಕ್ಕೆ ಕೈಜೋಡಿಸಲಿವೆ ಎಂದು ತಿಳಿಸಿದರು.

Key words: All India Folk and Tribal Art – Seminar -three days – March 13-mysore