ಅವರೆಲ್ಲ ಸ್ವತಂತ್ರ ಸರ್ಕಾರ ರಚಿಸುವವರು! : ಎಚ್.ಡಿ.ಕುಮಾರಸ್ವಾಮಿ ಮಾರ್ಮಿಕ ನುಡಿ

ಬೆಂಗಳೂರು, ಮೇ 13, 2023 (www.justkannada.in): ನನ್ನನ್ನು ಯಾರೂ ಸಂಪರ್ಕಿಸಿಲ್ಲ. ಅವರೆಲ್ಲ ಸ್ವತಂತ್ರ ಸರ್ಕಾರ ರಚಿಸುವವರು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ-ಕಾಂಗ್ರೆಸ್ ಸೇರಿದಂತೆ ನನ್ನನ್ನು ಯಾರೂ ಸಂಪರ್ಕಿಸಿಲ್ಲ. ಅವರೆಲ್ಲ ಸ್ವತಂತ್ರ ಸರ್ಕಾರ ರಚಿಸುವವರು ಎಂದು ಹೇಳಿದರು.

ರಾಜ್ಯದಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಬಾರದಿದ್ದರೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಜೆಡಿಎಸ್ ಬಾಗಿಲಿಗೆ ಬರಬೇಕಿದೆ.

ಈ ನಿಟ್ಟಿನಲ್ಲಿ ಚುನಾವಣಾ ನಂತರ ಸಮೀಕ್ಷೆಗಳು ಇದೇ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜೆಡಿಎಸ್ ನಿರ್ಣಾಯಕ ಪಾತ್ರ ವಹಿಸುವ ನಿರೀಕ್ಷೆ ಇದೆ.