ಬೆಂಗಳೂರು, ಆಗಸ್ಟ್, 12,2026 (www.justkannada.in): ತೀವ್ರ ಕುತೂಹಲ ಮೂಡಿಸಿದ್ದ ನೂತನ ಸಚಿವರಿಗೆ ಖಾತೆ ಹಂಚಿಕೆ ಕಗ್ಗಂಟು ಕೊನೆಗೂ ಬಗೆಹರಿದಿದ್ದು ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ ಎನ್ನಲಾಗಿದೆ.
ಆಗಸ್ಟ್ 3ರಂದು ಸಂಪುಟ ಪುನಾರಚನೆ ವೇಳೆ ಪ್ರಮಾಣವಚನ ಸ್ವೀಕರಿಸಿದ 19 ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲರ ಅಂಕಿತ ಬಿದ್ದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಜಲಸಂಪನ್ಮೂಲ ಖಾತೆ ನಿರ್ವಹಿಸುತ್ತಿದ್ದ ಸಚಿವ ರಾಮಲಿಂಗರೆಡ್ಡಿ ಮತ್ತು ಆಹಾರ ಇಲಾಖೆ ಸಚಿವರಾಗಿದ್ದ ಕೆ.ಎಚ್ ಮುನಿಯಪ್ಪ ಅವರ ಖಾತೆ ಬದಲಾವಣೆ ಮಾಡಲಾಗಿದೆ. ರಾಮಲಿಂಗರೆಡ್ಡಿ ಅವರಿಗೆ ಅರಣ್ಯ ಇಲಾಖೆ ಮತ್ತು ಕೆಎಚ್ ಮುನಿಯಪ್ಪ ಅವರಿಗೆ ಸಮಾಜ ಕಲ್ಯಾಣ ಇಲಾಖೆ ನೀಡಲಾಗಿದೆ.
ಯಾರಿಗೆ ಯಾವ ಯಾವ ಖಾತೆ ಇಲ್ಲಿದೆ ?
ಲಕ್ಷ್ಮಣ ಸವದಿ- ಸಹಕಾರ ಇಲಾಖೆ
ರಾಮಲಿಂಗರೆಡ್ಡಿ-ಅರಣ್ಯ ಇಲಾಖೆ
ಕೆ.ಹೆಚ್.ಮುನಿಯಪ್ಪ-ಸಮಾಜ ಕಲ್ಯಾಣ ಇಲಾಖೆ
ಸಂತೋಷ್ ಲಾಡ್- ಕಾರ್ಮಿಕ ಇಲಾಖೆ
ಯು.ಟಿ.ಖಾದರ್-ಆರೋಗ್ಯ ಮತ್ತು ಕಲ್ಯಾಣ ಇಲಾಖೆ
ಶಿವರಾಜ್ ತಂಗಡಗಿ- ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ
ಬಸವರಾಜ ರಾಯರೆಡ್ಡಿ-ಉನ್ನತ ಶಿಕ್ಷಣ
ಎಚ್.ಸಿ.ಬಾಲಕೃಷ್ಣ-ಪೌರಾಡಳಿತ
ಕೆ.ಎಸ್.ಬಸವಂತಪ್ಪ-ಮುಜರಾಯಿ, ಮೀನುಗಾರಿಕೆ
ಎನ್.ಚಲುವರಾಯಸ್ವಾಮಿ- ಜಲಸಂಪನ್ಮೂಲ ಇಲಾಖೆ
ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ
ಎಸ್.ಎಸ್.ಮಲ್ಲಿಕಾರ್ಜುನ್- ಗಣಿ ಮತ್ತು ಭೂವಿಜ್ಞಾನ ಇಲಾಖೆ
ಬಿ.ನಾಗೇಂದ್ರ-ಯೋಜನೆ & ಸಾಂಖ್ಯಿಕ ಇಲಾಖೆ
ಪಿ.ಎಂ.ನರೇಂದ್ರಸ್ವಾಮಿ-ಕೃಷಿ ಇಲಾಖೆ
ಸಿ.ಪುಟ್ಟರಂಗಶೆಟ್ಟಿ-ಪಶು ಸಂಗೋಪನಾ ಇಲಾಖೆ, ರೇಷ್ಮೆ
ಟಿ.ರಘುಮೂರ್ತಿ-ಪರಿಶಿಷ್ಟ ಪಂಗಡ ಕಲ್ಯಾಣ ಖಾತೆ
ರಿಜ್ವಾನ್ ಅರ್ಷದ್-ಆಹಾರ & ನಾಗರಿಕ ಪೂರೈಕೆ ಇಲಾಖೆ
ರುದ್ರಪ್ಪ ಲಮಾಣಿ- ಸಕ್ಕರೆ ಮತ್ತು ಜವಳಿ
ಶಿವಲಿಂಗೇಗೌಡ-ಅಬಕಾರಿ ಖಾತೆ
ವಿಜಯಾನಂದ ಕಾಶಪ್ಪನವರ್-ಸಣ್ಣ ಕೈಗಾರಿಕೆ
ಜಮೀರ್ ಅಹ್ಮದ್ ಖಾನ್-ವಸತಿ
ಅಜಯ್ ಸಿಂಗ್-ಸಣ್ಣ ನೀರಾವರಿ, ಐಟಿ ಬಿಟಿ
Key words: Allocation, portfolios, ministers, Signed, Governor







