ಐದು  ಗ್ಯಾರಂಟಿ ಯೋಜನೆ ಜೊತೆಗೆ ಅಭಿವೃದ್ದಿಗೂ ಅನುದಾನ ಕೊಟ್ಟಿದ್ದೇವೆ- ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ.

ಬೆಂಗಳೂರು,ಆಗಸ್ಟ್,8,2023(www.justkannada.in): ನಾವು ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ದಿಗೂ ಅನುದಾನ ಕೊಟ್ಟಿದ್ದೇವೆ ಎಂದು ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ ನೀಡಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ನಾವು ಐದು ಗ್ಯಾರಂಟಿ ಯೋಜನೆಗಳಿಗೆ ಅನುದಾನ ಕೊಟ್ಟಿದ್ದೇವೆ. ಅನುದಾನ ಕೊರತೆಯಾಗಿದ್ದರೇ ಗ್ಯಾರಂಟಿ ಯೋಜನೆ ಜಾರಿ ಮಾಡಲು ಆಗುತ್ತಿರಲಿಲ್ಲ. ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ದಿಗೂ ಅನುದಾನ ಕೊಟ್ಟಿದ್ದೇವೆ ಎಂದು ತಿಳಿಸಿದರು.

ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ವಿವಾದ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ಧರಾಮಯ್ಯ, ಪ್ರಕರಣವನ್ನ ಉನ್ನತ ಮಟ್ಟದ ತನಿಖೆಗೆ ಕೊಡಿ ಅಂತಿದ್ರು ಪ್ರಕರಣವನ್ನ ಸಿಐಡಿ ತನಿಖೆಗೆ ಕೊಟ್ಟಿದ್ದೇವೆ. ಬಿಜೆಪಿಯವರು  ಸಿಐಡಿ ತನಿಖೆ ಕೂಡ ಬೇಡ ಅಂತಾರೆ. ಬಿಜೆಪಿ ಅವಧಿಯಲ್ಲಿ ಕೇಸ್ ಮುಚ್ಚಿದ್ದಾರೆ ಅಂತಾನಾ..? ಎಂದು ಟಾಂಗ್ ನೀಡಿದರು.

ಬಿಬಿಎಂಪಿ ಕಾಮಗಾರಿ ಬಗ್ಗೆ ದೂರು ಬಂದಿದೆ. ಹಾಗಾಗಿ ತನಿಖೆ ನಡೆಸುತ್ತಿದ್ದೇವೆ. ಬಿಬಿಎಂಪಿ, ಬಿಡಿಎ ವ್ಯಾಪ್ತಿಯಲ್ಲಿ ಅನೇಕ ಕೆಲಸಗಳಾಗಿವೆ ಇವುಗಳ ಸತ್ಯಾಸತ್ಯತೆ ತಿಳಿಯಲುತ ತನಿಖೆಗೆ ನಡೆಸುತ್ತಿದ್ದೇವೆ ಎಂದರು.

Key words: Along – five -guarantee -scheme, – grants -development – CM Siddaramaiah