ಅನ್ನಭಾಗ್ಯ ಯೋಜನೆ: ಕಾಂಗ್ರೆಸ್ ಸರ್ಕಾರದಿಂದ ಗೊಂದಲವನ್ನುಂಟು ಮಾಡುವ ಯತ್ನ- ಮಾಜಿ ಸಿಎಂ ಬಿಎಸ್ ವೈ.

ಶಿವಮೊಗ್ಗ,ಜೂನ್,19,2023(www.justkannada.in): ಅನ್ನಭಾಗ್ಯ ಯೋಜನೆ ಜಾರಿಗೊಳಿಸುವ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಗೊಂದಲ ಉಂಟು ಮಾಡುಲು ಪ್ರಯತ್ನಿಸುತ್ತಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕಿಡಿಕಾರಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, 10 ಕೆಜಿ ಅಕ್ಕಿ ಕೊಡುವ ಗ್ಯಾರಂಟಿ ಘೋಷಿಸುವಾಗ ಸಿದ್ದರಾಮಯ್ಯ,  ಡಿಕೆ ಶಿವಕುಮಾರ್ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಕ್ಕಿ ನೀಡುವುದಾಗಿ ಹೇಳಿರಲಿಲ್ಲ. ಪ್ರಸ್ತುತವಾಗಿ ಜನರಿಗೆ ಪ್ರತಿ ತಿಂಗಳು ಸಿಗುತ್ತಿರುವ 5 ಕೆಜಿ ಅಕ್ಕಿ ಪ್ರಧಾನಿಯವರೇ ನೀಡುತ್ತಿದ್ದಾರೆ. ಜನತೆಗೆ ನೀಡಿದ ಭರವಸೆಯನ್ನು ಉಳಿಸಿಕೊಳ್ಳುವುದು ಕಾಂಗ್ರೆಸ್ ಸರ್ಕಾರದ ಹೊಣೆಗಾರಿಕೆ. ಹೀಗಾಗಿ  ಅಕ್ಕಿ ಖರೀದಿ ಮಾಡಿಯಾದರೂ ತರಲಿ ಅಥವಾ ಏನಾದರೂ ಮಾಡಲಿ, ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಲೇಬೇಕು ಎಂದು ಆಗ್ರಹಿಸಿದರು.

Key words: Annabhagya Yojana-attempt – create -confusion – Congress government-BS yeddyurappa.