ಸಚಿವ ಸಂಪುಟ ಸಭೆ ಬಳಿಕ ಗ್ಯಾರಂಟಿ ಯೋಜನೆ ಬಗ್ಗೆ ಘೋಷಣೆ-ಸಚಿವ ರಾಮಲಿಂಗರೆಡ್ಡಿ.

ಬೆಂಗಳೂರು,ಜೂನ್,2,2023(www.justkannada.in):  ಕಾಂಗ್ರೆಸ್​ ಸರ್ಕಾರ  5 ಗ್ಯಾರೆಂಟಿಗಳನ್ನು ಜಾರಿಗೊಳಿಸಲು ಕಸರತ್ತು ನಡೆಸುತ್ತಿದ್ದು ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಲಿದೆ.

ಈ ಸಂಬಂಧ ಇಂದು ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಇಂದಿನ ಸಭೆಯಲ್ಲೇ ಐದು ಗ್ಯಾರಂಟಿಗಳ ಕುರಿತು ಅಂತಿಮ ನಿರ್ಧಾರವಾಗಲಿದೆ . ಖುದ್ದು ಸಿಎಂ ಸಿದ್ದರಾಮಯ್ಯ ಕ್ಯಾಬಿನೆಟ್ ಬಳಿಕ ಗ್ಯಾರಂಟಿ ಘೋಷಣೆಗೆ ಸಜ್ಜಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಎಲ್ಲಾ ಇಲಾಖೆ ಜತೆ ಸಭೆ ನಡೆಸಿದ್ದು, ಅಂತಿಮ ನಿರ್ಧಾರಕ್ಕೆ ಬಂದಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ.

ಈ ಕುರಿತು ಮಾತನಾಡಿರುವ ಸಾರಿಗೆ ಸಚಿವ ರಾಮಲಿಂಗರೆಡ್ಡಿ,  ಬೆಳಿಗ್ಗೆ 11ಕ್ಕೆ ಸಚಿವ ಸಂಪುಟ ಸಭೆ ಇದೆ.  ಸಚಿವ ಸಂಪುಟ ಸಭೆ ಬಳಿಕ ಘೋಷಣೆಯಾಗುತ್ತೆ.  ಸ್ವತಃ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಲಿದ್ದಾರೆ ಮಧ್ಯಾಹ್ನದ ವೇಳೆಗೆ ಘೋಷಣೆ ಮಾಡಲಿದ್ದಾರೆ ಎಂದರು.

Key words: Announcement – guarantee -scheme – Cabinet meeting – Minister -Ramalingareddy.