Tuesday, August 4, 2026

BDA Apartments

Home Cinema ನಟ ದರ್ಶನ್ ಜಾಮೀನು ರದ್ದು ಕೋರಿ ಮೇಲ್ಮನವಿಗೆ ಸಿದ್ದತೆ- ಪೊಲೀಸ್ ಆಯುಕ್ತ ಬಿ.ದಯಾನಂದ್

ನಟ ದರ್ಶನ್ ಜಾಮೀನು ರದ್ದು ಕೋರಿ ಮೇಲ್ಮನವಿಗೆ ಸಿದ್ದತೆ- ಪೊಲೀಸ್ ಆಯುಕ್ತ ಬಿ.ದಯಾನಂದ್

ಬೆಂಗಳೂರು,ನವೆಂಬರ್,19,2024 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಆರೋಪಿ ನಟ ದರ್ಶನ್ ಗೆ ಮಂಜೂರಾಗಿರುವ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಸಿದ್ದತೆ ನಡೆಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಪೊಲೀಸ್ ಆಯುಕ್ತ ಬಿ.ದಯಾನಂದ್, ದರ್ಶನ್ ಜಾಮೀನು ರದ್ದುಗೊಳಿಸಲು ಕೋರಿ ಸುಪ್ರೀಂಕೋರ್ಟ್ ಗೆ ಮೆಲ್ಮನವಿ ಸಲ್ಲಿಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಮೇಲ್ಮನವಿ ಸಲ್ಲಿಸಲು ಈಗಾಗಲೇ ದಾಖಲೆ ಸಿದ್ದಪಡಿಸಿಕೊಳ್ಳಲಾಗಿದೆ ಎಂದರು.

ಕನ್ನಡದಲ್ಲಿರುವ ಮಾಹಿತಿಯನ್ನು ಇಂಗ್ಲೀಷ್ ಗೆ ಭಾಷಾಂತರ ಮಾಡಿ ಸಲ್ಲಿಕೆಗೆ ಸಿದ್ದತೆ ಮಾಡಲಾಗಿದ್ದು ಶೀಘ್ರದಲ್ಲೇ ಮೇಲ್ಮನವಿ ಸಲ್ಲಿಕೆಯಾಗಲಿದೆ ಎಂದು ಬಿ.  ದಯಾನಂದ್ ತಿಳಿಸಿದರು.

Key words: appeal, cancellation, Actor, Darshan, bail, Police Commissioner, B. Dayanand