ಒಳ್ಳೆ ಕೆಲಸ ಮಾಡಿದ ಸಂಸದನ ಟೀಕಿಸುವ ಬದಲು ಬೆಡ್ ಗಳ ವ್ಯವಸ್ಥೆ ಮಾಡಿ- ವಿಪಕ್ಷಗಳಿಗೆ ಸಂಸದ ಪ್ರತಾಪ್ ಸಿಂಹ ಟಾಂಗ್…

ಮೈಸೂರು,ಮೇ,8,2021(www.justkannada.in): ಸಂಸದ ತೇಜಸ್ವಿ ಸೂರ್ಯ ಬಹಳ ಒಳ್ಳೆಯ ಕೆಲಸ ಮಾಡಿದ್ದಾರೆ. ಒಳ್ಳೆ ಕೆಲಸ ಮಾಡಿದ ಸಂಸದನ ಟೀಕಿಸುವ ಬದಲು ಬೆಡ್ ಗಳ ವ್ಯವಸ್ಥೆ ಮಾಡಿ  ಎಂದು ವಿಪಕ್ಷಗಳಿಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.jk

ಬಿಬಿಎಂಪಿಯ ಬೆಡ್ ಬ್ಲಾಕ್ ದಂಧೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಸಂಸದ ಪ್ರತಾಪ್ ಸಿಂಹ, ಸಂಸದ  ತೇಜಸ್ವಿ ಸೂರ್ಯ ಅವರು ಒಂದು ಧರ್ಮದವರ ಪಟ್ಟಿ ಓದಿದರು ಎಂದು ಅವರನ್ನು ಟೀಕಿಸುತ್ತ ಈ ವಿಚಾರದಲ್ಲಿ ಹಿಮ್ಮುಖರಾಗುವಂತೆ ಮಾಡುವುದು ಸರಿಯಲ್ಲ. ವಿರೋಧ ಪಕ್ಷಗಳು ಒಳ್ಳೆಯ ಕೆಲಸ ಮಾಡಿದ ಸಂಸದನನ್ನು ಟೀಕಿಸಲು ಸಮಯ ವ್ಯರ್ಥ ಮಾಡುವ ಬದಲು. ತಮ್ಮ ಕ್ಷೇತ್ರಗಳಲ್ಲಿ ಬೆಡ್‌ ಗಳ ವ್ಯವಸ್ಥೆ ಮಾಡಲಿ. ಸಾಮಾಜಿಕ ಜಾಲತಾಣಗಳಲ್ಲಿ ಬೇರೆ ಕಡೆಗಳಲ್ಲಿ ತೇಜಸ್ವಿ ಸೂರ್ಯನನ್ನ ಟೀಕಿಸುವುದು. ಯಾರು ಒಪ್ಪಿಕೊಳ್ಳುವ ಮಾತಲ್ಲ ಎಂದು ಕಿಡಿಕಾರಿದರು.

ರಾಜ್ಯ ಸರ್ಕಾರ ಕೂಡಲೇ ಜಿಲ್ಲಾವಾರು ಆಕ್ಸಿಜನ್ ಕೋಟಾ ನಿಗಧಿ ಮಾಡಬೇಕು….

ಚಾಮರಾಜನಗರ ಮಂಡ್ಯ ಹಾಸನ ನಾವು ಸಹೋದರರಿದ್ದಂತೆ. ಆಕ್ಸಿಜನ್ ವಿಚಾರದಲ್ಲಿ ನಮ್ಮ ನಡುವೆ ವಿರಸ ಮೂಡುವ  ಪರಿಸ್ಥಿತಿ ನಿರ್ಮಾಣ ಆಗಿದೆ. ಈ ಪರಿಸ್ಥಿತಿ ತಪ್ಪಬೇಕಾದರೆ ರಾಜ್ಯ ಸರ್ಕಾರ ಕೂಡಲೇ ಜಿಲ್ಲಾವಾರು ಆಕ್ಸಿಜನ್ ಕೋಟಾ ನಿಗಧಿ ಮಾಡಬೇಕು. ಕೋಟಾ ನಿಗಧಿಯಾಗದ ಹೊರತು ಈ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದರು. arrange-beds-criticizing-good-work-opposite-party-mp-prathap-sinha

ಮಂಡ್ಯ, ಚಾಮರಾಜನಗರದವರು ಇಲ್ಲಿಗೆ ಬಂದಾಗ ನಮಗೆ ಆಕ್ಸಿಜನ್ ಕೊಡಲು ಸಾಧ್ಯವಾಗದಿದ್ದರೆ. ಮೈಸೂರನ್ನ ಮತ್ತೇ ಕಟಕಟೆಯಲ್ಲಿ ನಿಲ್ಲಿಸುವ ಪರಿಸ್ಥಿತಿ ನಿರ್ಮಾಣ ಆಗಲಿದೆ. ಇದಕ್ಕೆ ಸರ್ಕಾರ ಅವಕಾಶ ಕೊಡಬಾರದು. ನಾನು ಬಹಳ ಸದ್ದುದ್ದೇಶದಿಂದ ಆಕ್ಸಿಜನ್ ಕೋಟಾ ನಿಗದಿಗೆ ಮನವಿ ಮಾಡುತ್ತಿದ್ದೇ‌ನೆ. ಮೈಸೂರಿನಲ್ಲಿ 7 ಸಾವಿರ ಬೆಡ್‌ಗಳ ಆಕ್ಸಿಜನ್ ವ್ಯವಸ್ಥೆ ಆಗುತ್ತಿದೆ. ನಮಗು ಆಕ್ಸಿಜನ್ ಕೊರತೆ ಉಂಟಾಗಬಹುದು. ಸರ್ಕಾರ ತುರ್ತಾಗಿ ಕೋಟಾ ನಿಗದಿ ಮಾಡಲಿ. ಸಿಎಂ ಇದನ್ನ ಆದಷ್ಟು ಬೇಗ ಮಾಡುತ್ತಾರೆಂಬ ವಿಶ್ವಾಸ ಇದೆ ಎಂದು ಸಂಸದ ಪ್ರತಾಪ್ ಸಿಂಹ  ಹೇಳಿದರು.

Key words: Arrange- beds -criticizing -good-work- opposite party-MP-PratHap Sinha