ಶ್ರೀರಾಮನ ಫ್ಲೆಕ್ಸ್ ಹರಿದಿದ್ದ ಇಬ್ಬರ ಬಂಧನ.

ಕೋಲಾರ, ಜನವರಿ 17,2024(www.justkannada.in):  ಶ್ರೀರಾಮನ ಕಟೌಟ್ ಹಾಗೂ ಪ್ಲೆಕ್ಸ್​ ಅನ್ನು ಬ್ಲೇಡ್​​ನಿಂದ ಹರಿದಿದ್ದ ಇಬ್ಬರು ಆರೋಪಿಗಳನ್ನ ಮುಳಬಾಗಿಲು ಠಾಣಾ ಪೊಲೀಸರು ಬಂಧಿಸಿದ್ದಾರೆ.

ಮುಳಬಾಗಿಲು ನಗರದ ಗುಣಗಂಟೆಪಾಳ್ಯದಲ್ಲಿ ಶ್ರೀರಾಮನ ಫ್ಲೆಕ್ಸ್ ಹರಿದ ಪ್ರಕರಣ ನಡೆದಿತ್ತು. ನಿನ್ನೆ  ರಾತ್ರಿ 10.44ರ ಸುಮಾರಿಗೆ ದುಷ್ಕರ್ಮಿಗಳು ಬ್ಲೇಡ್​ನಿಂದ ಹರಿದು ಹಾಕಿದ್ದರು. ಈ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು. ಇದೀಗ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.  ಶ್ರೀರಾಮನ ಕಟೌಟ್ ​ನ್ನು ಹರಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಜನವರಿ 22 ರಂದು ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತದೆ. ಈ ಹಿನ್ನೆಲೆಯಲ್ಲಿ ಲವಕುಶ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​​​ ಮತ್ತು ಪುತ್ರ ಅಯೋಧ್ಯೆ ಧ್ರುವ ಚಾರಿಟಬಲ್​​ ಟ್ರಸ್ಟ್​​ ವತಿಯಿಂದ ನಗರದಲ್ಲಿ ರಾಮನ ಶೋಭಾಯಾತ್ರೆ, ಸೀತರಾಮ ಕಲ್ಯಾಣೋತ್ಸವ ಮತ್ತು ಮಹಾಸಾಮ್ರಾಜ್ಯ ಪಟ್ಟಾಭಿಷೇಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ದಿನಾಂಕ 21 ಮತ್ತು 22 ರಂದು ಎರಡು ದಿನ ಈ ಕಾರ್ಯಕ್ರಮಗಳು ನಡೆಯಲಿದ್ದವು.ಹೀಗಾಗಿ ನಗರದಲ್ಲಿ ಬ್ಯಾನರ್​ ಮತ್ತು ಶ್ರೀರಾಮ ಕಟೌಟ್​ ನಿಲ್ಲಿಸಲಾಗಿತ್ತು.

Key words: Arrest – two people – torn -Sri Rama’s- flex.