ಶಿವಮೊಗ್ಗ,ಜೂನ್,12,2025 (www.justkannada.in): ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ತಂಡಕ್ಕೆ ಇದೀಗ ಮತ್ತೊಂದು ಶಾಕ್ ಉಂಟಾಗಿದ್ದು, ಇದೀಗ ಮತ್ತೊಬ್ಬ ಕಲಾವಿದ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
‘ಕಾಂತಾರ: ಚಾಪ್ಟರ್ 1ಸಿನಿಮಾ ಶೂಟಿಂಗ್ ಗಾಗಿ ಆಗಮಿಸಿದ್ದ ಕೇರಳದ ತ್ರಿಶೂರ್ ಮೂಲಕ ವಿಜು ವಿಕೆ ಎಂಬುವವರು ಮೃತಪಟ್ಟವರು. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಶೂಟ್ ಗಾಗಿ ಅವರು ಕರ್ನಾಟಕಕ್ಕೆ ಬಂದಿದ್ದರು. ಆಗುಂಬೆಯ ಸಮೀಪದ ಹೋಂ ಸ್ಟೇನಲ್ಲಿ ಉಳಿದುಕೊಂಡಿದ್ದರು. ಜೂನ್ 11ರಂದು ರಾತ್ರಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು ತಕ್ಷಣವೇ ಅವರನ್ನ ತೀರ್ಥಹಳ್ಳಿಯ ಆಸ್ಪತ್ರೆಗೆ ರವಾನಿಸುವಾಗ ಮಾರ್ಗ ಮಧ್ಯೆ ನಿಧನ ಹೊಂದಿದ್ದಾರೆ.
ಈ ಮೊದಲು ‘ಕಾಂತಾರ: ಚಾಪ್ಟರ್ 1’ ಚಿತ್ರದ ಜೂನಿಯರ್ ಆರ್ಟಿಸ್ಟ್ ಕಪಿಲ್ ಎಂಬುವವರು ಶೂಟಿಂಗ್ ಮುಗಿಸಿದ ಬಳಿಕ ಕೊಲ್ಲೂರಿನ ಸೌಪರ್ಣಿಕ ನದಿಯಲ್ಲಿ ತಮ್ಮ ತಂಡದವರ ಜೊತೆ ಈಜಲು ತೆರಳಿದ್ದ ವೇಳೆ ಸಾವನ್ನಪ್ಪಿದ್ದರು. ಮೇ 6ರಂದು ಈ ಘಟನೆ ನಡೆದಿತ್ತು.
ಆ ಬಳಿಕ ಚಿತ್ರದ ಕಲಾವಿದ ರಾಕೇಶ್ ಪೂಜಾರಿ ಕೂಡ ಮೃತಪಟ್ಟರು. ‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿ ಇವರು ಪ್ರಮುಖ ಪಾತ್ರ ಮಾಡುತ್ತಿದ್ದರು. ಅವರು ಗೆಳೆಯನ ಮದುವೆಯಲ್ಲಿ ಭಾಗಿಯಾದಾಗ ಭರ್ಜರಿಯಾಗಿ ಡ್ಯಾನ್ಸ್ ಮಾಡುತ್ತಿದ್ದರು. ಆ ಬಳಿಕ ಕುಸಿದು ಬಿದ್ದರು. ಅವರು ಕೂಡ ಹೃದಯಘಾತದಿಂದ ಮೃತಪಟ್ಟಿದ್ದರು.
ಇದೀಗ ಕೇರಳ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ವಿಜು ವಿಕೆ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
Key words: Kantara film, Another, artist ,dies , heart attack