Sunday, September 20, 2026

BDA Apartments

ಓದುವ ಸಂಸ್ಕೃತಿ ಹರಡಲು ಲೇಖಕ ಎಂ ಅಬ್ದುಲ್ ರೆಹಮಾನ್ ಪಾಷ ಕರೆ BDA JK_Adv BDA Adv
Home Front Page ಓದುವ ಸಂಸ್ಕೃತಿ ಹರಡಲು ಲೇಖಕ ಎಂ ಅಬ್ದುಲ್ ರೆಹಮಾನ್ ಪಾಷ ಕರೆ.

ಓದುವ ಸಂಸ್ಕೃತಿ ಹರಡಲು ಲೇಖಕ ಎಂ ಅಬ್ದುಲ್ ರೆಹಮಾನ್ ಪಾಷ ಕರೆ.

ಬೆಂಗಳೂರು,ಜನವರಿ,26,2024(www.justkannada.in): ಸಂವಿಧಾನ ಅರಿವಿಗೆ ಇರುವ ಬಾಗಿಲು. ಅರಿವು ಬದಲಾವಣೆಗೆ ಇರುವ ದಾರಿದೀಪ. ಹಾಗಾಗಿ ಓದುವ ಸಂಸ್ಕೃತಿಯನ್ನು ಹರಡಬೇಕಾದ ತುರ್ತು ನಮ್ಮ ಮುಂದಿದೆ ಎಂದು ಹಿರಿಯ ಸಾಹಿತಿ, ಭಾಷಾಂತರಕಾರ ಎಂ.ಅಬ್ದುಲ್ ರೆಹಮಾನ್ ಪಾಷ ಅವರು ಅಭಿಪ್ರಾಯಪಟ್ಟರು.

‘ ಪರಾಗ್ ‘ ಸಂಸ್ಥೆ ಹಾಗೂ ‘ ಬಹುರೂಪಿ ‘ ಪ್ರಕಾಶನ ಹಮ್ಮಿಕೊಂಡಿರುವ ‘ಬಿಂಬ ಪ್ರತಿಬಿಂಬ’ ಮೂರು ದಿನಗಳ ಮಕ್ಕಳ ಕೃತಿಗಳ ಭಾಷಾಂತರ ಕಲಿಕಾ ಕಾರ್ಯಾಗಾರವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಸಂವಿಧಾನದ ದಿನದ ಅಂಗವಾಗಿ ಸಂವಿಧಾನದ ಪೀಠಿಕೆಯನ್ನು ಅನಾವರಣ ಮಾಡಿ ಪ್ರತಿಜ್ಞಾ ವಿಧಿಯನ್ನು ಕೈಗೊಳ್ಳಲಾಯಿತು. ಬಹುರೂಪಿ ಪ್ರಕಟಿಸಿರುವ ಗುಜ್ಜಾರ್ ಅವರ ‘ಎಲ್ಲರಿಗಾಗಿ ಅಂಬೇಡ್ಕರ್ ‘ ಸಚಿತ್ರ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.

ಸಂವಿಧಾನ ಜನರಿಗೆ ನೀಡಿರುವ ಭರವಸೆ ದೊಡ್ಡದು. ಈ ಭರವಸೆಯನ್ನು ಉಳಿಸಿಕೊಳ್ಳಬೇಕಾದ ತುರ್ತು ಎಲ್ಲರ ಮುಂದಿದೆ ಎಂದು ಎಂ.ಅಬ್ದುಲ್ ರೆಹಮಾನ್ ಪಾಷ ಪಾಷಾ ಅಭಿಪ್ರಾಯಪಟ್ಟರು.ಓದುವ ಸಂಸ್ಕೃತಿ ಹರಡಲು ಲೇಖಕ ಎಂ ಅಬ್ದುಲ್ ರೆಹಮಾನ್ ಪಾಷ ಕರೆ pasha

ಪರಾಗ್ ಸಂಸ್ಥೆಯ ಮುಖ್ಯಸ್ಥರಾದ ಲಕ್ಷ್ಮಿ ಕರುಣಾಕರನ್ ಅವರು ಮಾತನಾಡಿ ಇಂದು ಸಂವಿಧಾನದ ಆಶಯವನ್ನು ಎಲ್ಲರೆಡೆಗೆ ಕೊಂಡೊಯ್ಯಬೇಕಾದ ತುರ್ತು ಇದೆ. ಪರಾಗ್ ಮಕ್ಕಳ ಕೃತಿಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಅದನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದೆ ಎಂದರು

ಅಂಬೇಡ್ಕರ್ ಅವರ ಕಾಲಾನುಕಾಲದ ಹೇಳಿಕೆಗಳ ಮೂಲಕ ಅವರ ಮಹತ್ವವನ್ನು ಮನಗಾಣಿಸುವ ಪ್ರಯತ್ನವನ್ನು ಎಲ್ಲರಿಗಾಗಿ ಅಂಬೇಡ್ಕರ್ ಕೃತಿಯ ಮೂಲಕ ಮಾಡಲಾಗಿದೆ ಎಂದು ಬಹುರೂಪಿ ಸಹ ಸಂಸ್ಥಾಪಕರಾದ ಶ್ರೀಜಾ ವಿ. ಎನ್. ತಿಳಿಸಿದರು.

ಮಕ್ಕಳ ಸಾಹಿತ್ಯ ತಜ್ಞರಾದ ತೇಜಸ್ವಿ ಶಿವಾನಂದ್, ಪರಾಗ್ ನ ತುಹಿನಾ ಶರ್ಮ, ವಿವೇಕ್, ಬಹುರೂಪಿಯ ಜಿ ಎನ್ ಮೋಹನ್ ಉಪಸ್ಥಿತರಿದ್ದರು.

Key words: Author -M Abdul Rahman Pasha- calls – spread – culture – reading.