Monday, August 31, 2026

BDA Apartments

Home Front Page ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ: ನಾನು ಯಾರಿಗೂ ಟಿಕೆಟ್ ಭರವಸೆ ಕೊಟ್ಟಿಲ್ಲ ಎಂದ ಡಿಸಿಎಂ ಡಿ.ಕೆ...

ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ: ನಾನು ಯಾರಿಗೂ ಟಿಕೆಟ್ ಭರವಸೆ ಕೊಟ್ಟಿಲ್ಲ ಎಂದ ಡಿಸಿಎಂ ಡಿ.ಕೆ ಶಿವಕುಮಾರ್.

ಬೆಂಗಳೂರು,ಆಗಸ್ಟ್,24,2023(www.justkannada.in):  ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ತೊರೆದು ಜೆಡಿಎಸ್ ಸೇರಿದ್ಧ ಆಯನೂರು ಮಂಜುನಾಥ್ ಇದೀಗ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಆಯನೂರು ಮಂಜುನಾಥ್ ಮತ್ತು ನಾಗರಾಜ್ ಗೌಡ  ಕಾಂಗ್ರೆಸ್ ಸೇರಿದರು. ಆಯನೂರು ಮಂಜುನಾಥ್ ಗೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪಕ್ಷದ ಬಾವುಟ ನೀಡಿ ಬರ ಮಾಡಿಕೊಂಡರು.

ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್,  ಪಕ್ಷದ ಸಿದ್ದಾಂತ ಒಪ್ಪಿ ಬರುವವರಿಗೆ. ನಾನು ಯಾರಿಗೂ ಟಿಕೆಟ್ ಭರವಸೆ ಕೊಟ್ಟಿಲ್ಲ ಶಕ್ತಿ ಸಾಮರ್ಥ್ಯದ ಆಧಾರದ ಮೇಲೆ ಟಿಕೆಟ್ ನಿರ್ಧಾರವಾಗುತ್ತದೆ. ಸಿಎಂ ಹೈಕಮಾಂಡ್  ನಿರ್ಧಾರ ಮಾಡುತ್ತಾರೆ.   ಆಯನೂರು ಮಂಜುನಾಥ್ ಗೆ  ಟಿಕೆಟ್ ಭರವಸೆ ನೀಡಿಲ್ಲ  ಎಂದರು.

Key words: Ayanur Manjunath- joins –Congress-DCM-DK Shivakumar-