ಸರ್ಕಾರಿ ಶಾಲೆಗಳನ್ನು ಮುಚ್ಚಲು  ದೊಡ್ಡ ಹುನ್ನಾರ-ಸರ್ಕಾರದ ವಿರುದ್ಧ ಬಿಸಿ ನಾಗೇಶ್​ ಆಕ್ರೋಶ.

ಬೆಂಗಳೂರು,ಆಗಸ್ಟ್,18,2023(www.justkannada.in):  ಎನ್ ಇಪಿ ರದ್ದು ಮಾಡಲು ನಿರ್ಧರಿಸಿರುವ ಕಾಂಗ್ರೆಸ್​ ಸರ್ಕಾರದ ವಿರುದ್ಧ ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಮಾಜಿ ಸಚಿವ ಬಿ.ಸಿ ನಾಗೇಶ್, ಬಹುತೇಕ ರಾಜಕಾರಣಿಗಳು, ಅಧಿಕಾರಿಗಳು ಶಾಲೆ ನಡೆಸುತ್ತಿದ್ದಾರೆ. ಹಾಗಾಗಿ ಸರ್ಕಾರಿ ಶಾಲೆಗಳನ್ನು ಮುಚ್ಚಿಸಬೇಕು ಅಂತಾ  ಷಡ್ಯಂತ್ರ ನಡೆಯುತ್ತಿದೆ. ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಸ್​​.ಎಸ್​.ಮಲ್ಲಿಕಾರ್ಜುನ, ಎಂ.ಬಿ.ಪಾಟೀಲ್ ಶಿಕ್ಷಣ ಸಂಸ್ಥೆ ನಡೆಸುತ್ತಿದ್ದಾರೆ. ಸರ್ಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ದೊಡ್ಡ ಹುನ್ನಾರ ಮಾಡಿದೆ ಎಂದು ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಎನ್ ​ಇಪಿ ತೆಗೆದುಹಾಕುವ ಮೊದಲು ಜನರ ಮುಂದಿಡಲಿ ಅದರಲ್ಲಿ ಏನೆಲ್ಲ ಲೋಪದೋಷಗಳಿವೆ ಎಂದು ಬಹಿರಂಗಪಡಿಸಬೇಕು. ಖಾಸಗಿ ಸಂಸ್ಥೆಗಳ ಒತ್ತಡಕ್ಕೆ ಮಣಿದು ಈ ರೀತಿ ನಡೆದುಕೊಳ್ಳಬಾರದು ಎಂದು ಬಿಸಿ ನಾಗೇಶ್ ವಾಗ್ದಾಳಿ ನಡೆಸಿದರು.

Key words: B.S. Nagesh – against -Govt – closing- Govt schools.