ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾಮೀನು.

ನವದೆಹಲಿ,ಫೆಬ್ರವರಿ,20,2024(www.justkannada.in):  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸುಲ್ತಾನ್ ಪುರ ಕೋರ್ಟ್ ಜಾಮೀನು ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

2018 ರಲ್ಲಿ ಅಮಿತ್ ಶಾ ಅವರ ವಿರುದ್ಧ ನೀಡಿದ್ದ ಹೇಳಿಕೆ ಸಂಬಂಧ  ಬಿಜೆಪಿ ನಾಯಕರೊಬ್ಬರು ರಾಹುಲ್ ಗಾಂಧಿ ವಿರುದ್ದ ಮಾನನಷ್ಟ ಪ್ರಕರಣ ದಾಖಲಿಸಿದ್ದರು. ಇದೇ ಪ್ರಕರಣವನ್ನು ಸುಲ್ತಾನ್‌ಪುರದ ಸಂಸದ-ಶಾಸಕ ನ್ಯಾಯಾಲಯವು ವಿಚಾರಣೆ ನಡೆಸಿತು. ಇದು 2018 ರ ಪ್ರಕರಣವಾಗಿದ್ದು, ಬಿಜೆಪಿಯು ತಮ್ಮದು ಪ್ರಾಮಾಣಿಕ ಮತ್ತು ಸ್ವಚ್ಛ ರಾಜಕಾರಣದಲ್ಲಿ ನಂಬಿಕೆಯಿಟ್ಟಿರುವ ಪಕ್ಷ ಎಂದು ಹೇಳಿಕೊಳ್ಳುತ್ತಿದೆ. ಆದರೆ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ವ್ಯಕ್ತಿಯನ್ನು ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಕೂರಿಸಿದೆ ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು.   ಈ ಸಂಬಂಧ ರಾಹುಲ್ ಗಾಂಧಿ ವಿರುದ್ದ ಮಾನನಷ್ಟ ಪ್ರಕರಣ ದಾಖಲಾಗಿತ್ತು. ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ಆಗಸ್ಟ್ 4, 2018 ರಂದು ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದರು. ರಾಹುಲ್  ಗಾಂಧಿಯವರು ಅಮಿತ್ ಶಾ ಅವರ ಪ್ರತಿಷ್ಠೆಗೆ ಕಳಂಕ ತಂದಿದ್ದಾರೆ ಎಂದು ಆರೋಪಿಸಿದ್ದರು. ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯವು 2005 ರ ನಕಲಿ ಎನ್‌ಕೌಂಟರ್ ಪ್ರಕರಣದಿಂದ 2014 ರಲ್ಲಿ ಷಾ ಅವರನ್ನು ಬಿಡುಗಡೆ ಮಾಡಿತ್ತು.

ರಾಹುಲ್ ಗಾಂಧಿ ಅವರು ಸುಲ್ತಾನ್‌ ಪುರ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಸುಲ್ತಾನ್‌ ಪುರ ಎಂಪಿ ಎಂಎಲ್‌ಎ ನ್ಯಾಯಾಲಯ ಅವರಿಗೆ ಜಾಮೀನು ನೀಡಿತು ಮತ್ತು ಅವರು ಅಲ್ಲಿಂದ ನಿರ್ಗಮಿಸಿದರು.

ಭಾರತ್ ಜೋಡೋ ನ್ಯಾಯ ಯಾತ್ರೆ ನಡೆಯುತ್ತಿರುವ ಕಾರಣ ಜನವರಿ 18 ರಂದು ನ್ಯಾಯಾಲಯದ ಹಿಂದಿನ ವಿಚಾರಣೆಗೆ ಗಾಂಧಿ ಗೈರಾಗಿದ್ದರು, ಬಿಜೆಪಿಯಿಂದ ಟೀಕೆಗೆ ಗುರಿಯಾಗಿತ್ತು. ಅವರ ವಕೀಲರು ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದ ನಂತರ ಜಾಮೀನು ಸಿಕ್ಕಿದೆ.

Key words: Bail – Congress leader -Rahul Gandhi.