ಬೆಂಗಳೂರು,ಜನವರಿ,20,2026 (www.justkannada.in): ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಕೆಗೆ ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ನಾಯಕರ ಟೀಕಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ ರವಿ, ವಿಧಾನಸಭೆ ಚುನಾವಣೆಯಲ್ಲಿ ಇವಿಎಂನಲ್ಲಿ ಹೇಗೆ 135 ಸ್ಥಾನ ಪಡೆದಿರಿ ಎಂದು ಪ್ರಶ್ನಿಸಿದರು. ತಾಂತ್ರಿಕತೆ ಕಡೆಗೆ ಹೋಗೋದು ಒಳ್ಳೆಯ ಬೆಳವಣಿಗೆ . ಜಿಬಿಎ ಫಲಿತಾಂಶ ಬದಲಾಯಿಸಬಹುದು. ಜನಾಭಿಪ್ರಾಯದ ವಿರುದ್ದವಾಗಿ ಬದಲಾಯಿಸಬಹುದು. ಹೀಗಾಗಿ ಬ್ಯಾಲೆಟ್ ಪೇಪರ್ ಬಳಕೆಗೆ ಮುಂದಾಗಿದ್ದಾರೆ ಎಂದು ಕಿಡಿಕಾರಿದರು.
ಈ ಕುರಿತು ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಇವಿಎಂ ತಂದಿದ್ದೇ ಕಾಂಗ್ರೆಸ್. ಈಗ ಅವರಿಗೆ ನಂಬಿಕೆ ಇಲ್ಲ. ಬ್ಯಾಲೆಟ್ ಪೇಪರ್ ನಾದರೂ ತರಲಿ. ಇವಿಎಂನಾದರೂ ತರಲಿ ಜಿಬಿಎ ಚುನಾವಣೆಯಲ್ಲಿ ಗೆಲ್ಲುವುದು ಬಿಜೆಪಿ. ಇದು ಕಾಂಗ್ರೆಸ್ ನ ಕುತಂತ್ರ ಎಂದರು.
Key words: Decision, ballot papers, GBA elections, MLC, CT Ravi, criticizes







